Skip to main content

Posts

Showing posts from 2020

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಈಗ ರಾಜ್ಯ ಸರ್ಕಾರಿ ನೌಕರರಸೇವಾ ಸೌಲಭ್ಯ ಮತ್ತು ಇಲಾಖಾ ಪರೀಕ್ಷಾ ಅಧ್ಯಯನ ಸಾಮಗ್ರಿಗಳನ್ನುOnline ಮೂಲಕ Order ಮಾಡಿ‌ ಪಡೆಯಿರಿ.

ಈಗ ರಾಜ್ಯ ಸರ್ಕಾರಿ ನೌಕರರ ಸೇವಾ ಸೌಲಭ್ಯ ಮತ್ತು ಇಲಾಖಾ  ಪರೀಕ್ಷಾ ಅಧ್ಯಯನ ಸಾಮಗ್ರಿಗಳನ್ನು Online ಮೂಲಕ Order ಮಾಡಿ‌ ಪಡೆಯಿರಿ. ಈಗ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರತಿಯೊಬ್ಬ  ರಾಜ್ಯ ಸರ್ಕಾರಿ ನೌಕರರ ಸೇವಾವಧಿಯಲ್ಲಿ ಅಗತ್ಯವಾಗಿ  ಬೇಕಾಗುವ ಸೇವಾ ಸೌಲಭ್ಯ & ಇಲಾಖಾ ಪರೀಕ್ಷಾ  ಅಧ್ಯಯನ ಸಾಮಗ್ರಿಗಳನ್ನು  ಈಗ ಸುಲಭವಾಗಿ Online ನಲ್ಲಿ Order ಮಾಡಿ  India Post / Courier ಮೂಲಕ ನೇರವಾಗಿ  ರಾಜ್ಯದ ಯಾವುದೇ ಸ್ಥಳದಿಂದ ಪಡೆಯಬಹುದು. ಈ‌ ಸೌಲಭ್ಯವನ್ನು ನೇರವಾಗಿ What's App  ಮೂಲಕ " 9902135813 " ಗೆ " BOOKS "  ಎಂದು‌ SMS ಮಾಡಿದರೆ ನಮ್ಮಲ್ಲಿ ಲಭ್ಯವಿರುವ  ಎಲ್ಲಾ ಸೇವಾ ಸೌಲಭ್ಯ ಸಂಬಂಧಿಸಿದ ಸಾಮಗ್ರಿಗಳ ಪಟ್ಟಿ‌ ಲಭ್ಯವಾಗುವುದು. ಈ ಪಟ್ಟಿಯಲ್ಲಿ ಪುಸ್ತಕದ ಹೆಸರು, ಲೇಖಕರು, ಪುಸ್ತಕದ ಮುಖ ಬೆಲೆ, ಇತ್ಯಾದಿ ವಿವರಗಳನ್ನು ನೌಕರರಿಗೆ ಸುಲಭವಾಗಿ ತಮಗೆ ಬೇಕಾದ  ಸಾಮಗ್ರಿಗಳನ್ನು ಖರೀದಿಸುವ ರೀತಿಯಲ್ಲಿ‌  ತಯಾರಿಸಲಾಗಿದೆ. ಈ ಪಟ್ಟಿಯಲ್ಲಿ ನೌಕರರು ತಮಗೆ ಅಗತ್ಯವಿರುವ ಸಾಮಗ್ರಿಗಳನ್ನು ಆಯ್ಕೆ ಮಾಡಿಕೊಂಡು, ತಮ್ಮ ಪೂರ್ಣ ಹೆಸರು,  ವಿಳಾಸ,  ಪಿನ್ ಕೋಡ್ ಹಾಗೂ ಮೊಬೈಲ್ ಸಂಖ್ಯೆ    ಕಳುಹಿಸಕೊಡಬೇಕಾಗಿರುತ್ತದೆ. ಆಯ್ಕೆ ಮಾಡಲಾದ ಸಾಮಗ್ರಿಗಳ ಒಟ್ಟು ...

2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಿದೆ.

2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯೋಗದ ವೆಬ್ ಸೈಟ್ ನಲ್ಲಿ ಲಭ್ಯವಿದೆ 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಯ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯೋಗದ ವೆಬ್ ಸೈಟ್ “ http://kpsc.kar.nic.in ” ಮುಖಾಂತರ ಡಿಜಿಲಾಕರ್ ಮೊಬೈಲ್ ಆಪ್ ಅಕೌಂಟ್ ನೊಂದಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿ ನಂತರ ನಿಮ್ಮ ನೋಂದಣಿ ಸಂಖ್ಯೆ (7 ಅಂಕಿಗಳು) ಯನ್ನು Username ಆಗಿ ಮತ್ತು ಪಾನ್ ಕಾಡ್ ನಂಬರನ್ನು ಪಾಸ್ ವರ್ಡ್ ಆಗಿ ಉಪಯೋಗಿಸಿ ಪ್ರಮಾಣಪತ್ರಗಳನ್ನು ಲಾಗಿನ್ ಆದ 12 ಗಂಟೆಯ ನಂತರ ಪಡೆಯಬಹುದು. ಉತ್ತೀರ್ಣ ಪ್ರಮಾಣ ಪತ್ರವನ್ನು ಪಡೆಯುವ ವಿಧಾನವನ್ನು ಶೀಘ್ರದಲ್ಲೇ ನಮ್ಮ KSGEA NEWS YouTube ಚಾನಲ್ ನಲ್ಲಿ ವಿಡಿಯೋ ಮೂಲಕ ತಿಳಿಸಿಕೊಡಲಾಗುವುದು. ಮಾದರಿ ಉತ್ತೀರ್ಣ ಪ್ರಮಾಣ ಪತ್ರ. ಹೆ ಚ್ಚಿ ನ   ಮಾಹಿತಿಗಾಗಿ  ಸಂಪರ್ಕಿಸಿ: CLICK this to join my WhatsApp group Facebook           Telegram:t.me/ksgeabangalore,       Blogspot .      Website .     WhatsApp         Youtube   @syedKSGEA

ರಾಜ್ಯ ಮಟ್ಟದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ - 2020

 ರಾಜ್ಯ ಮಟ್ಟದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ - 2020 ಮಾನ್ಯ ನೌಕರ ಬಂಧುಗಳೇ,     ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸುಮಾರು 5.25 ಲಕ್ಷ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ರಾಷ್ಟ್ರದಲ್ಲಿಯೇ ಏಕೈಕ ಮಾದರಿ ಸಂಸ್ಥೆಯಾಗಿದ್ದು,  ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಆನ್‍ಲೈನ್ ಮೂಲಕ ರಾಜ್ಯ ಮಟ್ಟದಲ್ಲಿ ಸರ್ಕಾರಿ ನೌಕರರ ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ. & ಪಿ.ಯು.ಸಿ. ಪರೀಕ್ಷೇಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅನ್‍ಲೈನ್ ಅರ್ಜಿಯ ಲಿಂಕ್ ಕೇಂದ್ರ ಸಂಘದ ಸಾಮಾಜಿಕ ಜಾಲತಾಣದ ಫೇಸ್‍ಬುಕ್, ಟ್ವಿಟರ್ ಖಾತೆ ಹಾಗೂ  KSGEA NEWS Blogspot   ನಲ್ಲಿ ಲಭ್ಯವಿದ್ದು, ಈ ಲಿಂಕ್‍ಗಳನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. -ಸಿ.ಎಸ್. ಷಡಾಕ್ಷರಿ, ಅಧ್ಯಕ್ಷರು. ಆನ್ ಲೈನ್ ಅರ್ಜಿ ಈ ಲಿಂಕ್‍ಗಳಲ್ಲಿ ಪಡೆಯಬಹುದಾಗಿದೆ. ü KSGEA FaceBook   https://bit.ly/ksgeafb ü KSGEA News Blog : https://bit.ly/ksgeanews ü KSGEA Twitter :  https://twitter.com/GovtState ü KSGEA Telegram App : t.me/ksgeabangalore ü Google Forms...

ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮಗಳು-2020ರ ಕರಡು ನಿಯಮಾವಳಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಸಲ್ಲಿಸಿರುವ ಆಕ್ಷೇಪಣೆ

 ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮಗಳು-2020ರ ಕರಡು ನಿಯಮಾವಳಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸರ್ಕಾರಕ್ಕೆ ಸಲ್ಲಿಸಿರುವ ಆಕ್ಷೇಪಣೆ       ಕರ್ನಾಟಕ ರಾಜ್ಯ ಸರ್ಕಾರವು ಅಧಿಸೂಚನೆ ಸಂಖ್ಯೆ: ಸಿಆಸುಇ 12 ಸೇನಿಸಿ 20109, ದಿನಾಂಕ:       27-10-2020ರಂತೆ ರಂತೆ  ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ನಡತೆ ನಿಯಮಗಳನ್ನು ಮಾರ್ಪಡಿಸಿ, ಕರ್ನಾಟಕ ರಾಜ್ಯ ನಾಗರೀಕ ಸೇವಾ (ನಡತೆ) ನಿಯಮಗಳು-2020ರಂತೆ ಕರಡು ನಿಯಮಗಳನ್ನು ರೂಪಿಸಿ, ಸರ್ಕಾರಿ ನೌಕರರು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಆಕ್ಷೇಪಣೆ ಸಲಹೆಗಳನ್ನು ಆಹ್ವಾನಿಸಿರುತ್ತದೆ.  ಸದರಿ ಕರಡು ನಿಯಮಗಳಲ್ಲಿ ಪ್ರಸ್ತಾಪಿಸಲಾಗಿರುವ ಅಂಶಗಳು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರ ವ್ಯಾಪಾರ, ವ್ಯವಹಾರಗಳಿಗಳಿಗೂ ಪ್ರತಿಕೂಲ ಪರಿಣಾಮ ಬೀರುವಂತಿದ್ದು, ಈ  ಕರಡು ನಿಯಮಗಳನ್ನು ಜಾರಿಗೆ ತಂದಲ್ಲಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಅಭಿವ್ಯಕ್ತಿ ಸ್ವಾತಂತ್ರವನ್ನು ಹರಣ ಮಾಡಿದಂತಾಗಲಿದೆ ಅಲ್ಲದೆ  ಭಾರತದ ಸಂವಿಧಾನದಲ್ಲಿ ಈ ದೇಶದ ನಾಗರೀಕರಿಗೆ ನೀಡಿರುವಂತಹ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವಂತಿರುವ ಈ ನಿಯಮಗಳ ಬಗ್ಗೆ ರಾಜ್ಯಾದ್ಯಂತ ನೌಕರರು ತೀವ್ರ ಪ್ರತಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಸರ್ಕಾರಕ್ಕೆ ಅವಶ್ಯ ಮಾರ್ಗದರ್ಶನ ನೀಡುವಂತೆ ಸಂಘಕ್ಕೆ ಒತ್ತ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಶಿಕ್ಷಕರೊಂದಿಗೆ ನಡೆಸಿದ ಸಂವಾದ-ಚರ್ಚೆ‌ ಕಾರ್ಯಕ್ರಮ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು  ಶಿಕ್ಷಕರೊಂದಿಗೆ ನಡೆಸಿದ ಸಂವಾದ-ಚರ್ಚೆ‌ ಕಾರ್ಯಕ್ರಮ. ಚಿಕ್ಕಮಗಳೂರು ಜಿಲ್ಲೆಯಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಕ್ಷರಿ ರವರು,   ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಗೌಡಪ್ಪ ಪಾಟೀಲ್, ಗೌರವಾಧ್ಯಕ್ಷರಾದ ಶ್ರೀ ಶಿವರುದ್ರಯ್ಯ ವಿ.ವಿ., ಖಜಾಂಚಿಗಳಾದ ಶ್ರೀ ಆರ್. ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾದ ಶ್ರೀ ಎಂ.ವಿ. ರುದ್ರಪ್ಪ ಮತ್ತು ಚಿಕ್ಕಮಗಳೂರು ಜಿಲ್ಲಾ ಶಾಖೆ ಅಧ್ಯಕ್ಷರಾದ ಶ್ರೀ ದೇವೆಂದ್ರರವರು ಮತ್ತು ಜಿಲ್ಲೆಯ ಪದಾಧಿಕಾರಿಗಳು ಮತ್ತು‌ ಜಿಲ್ಲೆಯ ವಿವಿಧ ‌ಭಾಗಗಳಿಂದ ಆಗಮಿಸಿದ ಸುಮಾರು‌ 500 ನೌಕರರು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ‌ಕಾರ್ಯ ನಿರ್ವಹಿಸುವ ಪ್ರಾಥಮಿಕ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರ ಹಲವಾರು ‌ಸಮಸ್ಯೆ‌ ಹಾಗೂ ಕುಂದುಕೊರತೆಗಳನ್ನು ‌ಈಗಾಗಲೇ ಸರ್ಕಾರದ‌ ಕಾರ್ಯದರ್ಶಿಗಳ, ಇಲಾಖೆಯ ಆಯುಕ್ತರ‌ ಹಂತದಲ್ಲಿ ಸರ್ಕಾರಿ ನೌಕರರ‌ ಸಂಘದಿಂದ ಪರಿಹಾರ ಮಾಡಲಾಗುತ್ತಿದ್ದು, ಮುಂದೆಯು‌ ಸಹಾ ಶಿಕ್ಷಕರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಂಘವು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ಸಭೆಗೆ ಮಾನ್ಯ ರಾಜ್ಯಾಧ್ಯಕ್ಷರು‌ ತಿಳಿಸಿದರು‌. ಹೆ ಚ್ಚಿ ನ   ಮಾಹಿತಿಗಾಗಿ  ಸಂಪರ್ಕಿಸಿ Facebook...

ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರಿಂದ ಮಂಡ್ಯ ಜಿಲ್ಲೆಯಲ್ಲಿ ನಡೆದ ಪತ್ರಿಕಾ ಗೋಷ್ಠಿ.

ಸರ್ಕಾರಿ ನೌಕರರ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರಿಂದ ಮಂಡ್ಯ ಜಿಲ್ಲೆಯಲ್ಲಿ ನಡೆದ ಪತ್ರಿಕಾ ಗೋಷ್ಠಿ.  ದಿನಾಂಕ: 05-11-2020ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಮಂಡ್ಯ ಜಿಲ್ಲೆಯಲ್ಲಿ ನಡೆದ ಪತ್ರಿಕಗೋಷ್ಠಿಯಲ್ಲಿ ಸರ್ಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಜಗದೀಶ ಗೌಡಪ್ಪ ಪಾಟೀಲ್, ಗೌರವಾಧ್ಯಕ್ಷರಾದ ಶ್ರೀ ಶಿವರುದ್ರಯ್ಯ ವಿ.ವಿ., ಖಜಾಂಚಿಗಳಾದ ಶ್ರೀ ಆರ್. ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾದ ಶ್ರೀ ಎಂ.ವಿ. ರುದ್ರಪ್ಪ ಮತ್ತು ಮಂಡ್ಯ ಜಿಲ್ಲಾ ಶಾಖೆ ಅಧ್ಯಕ್ಷರಾದ ಶ್ರೀ ಶಂಭುಗೌಡರವರು ಮತ್ತು ಜಿಲ್ಲೆಯ ಪದಾಧಿಕಾರಿಗಳು ಈ ಸುದ್ದಿಗೊಷ್ಠಿಯಲ್ಲಿ ಹಾಜರಿದ್ದರು. ಸಂಘದ ಮುಂದಿರುವ ಪ್ರಮುಖ ಬೇಡಿಕೆಗಳು ರಾಜ್ಯ ಸರ್ಕಾರವು ದಿ: 01.04.2006 ರಿಂದ ಅನ್ವಯಿಸುವಂತೆ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಪದ್ದತಿಯನ್ನು ಕಡ್ಡಾಯಗೊಳಿಸಿದ್ದು, ಇದರಿಂದಾಗಿ ಸರ್ಕಾರಿ ನೌಕರರು ನಿಶ್ಚಿತ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿರುತ್ತಾರೆ. ಕಾರ್ಯಾಂಗದ ವ್ಯವಸ್ಥೆಯಲ್ಲಿ ಸುಮಾರು 2,28,000.00 ಜನ ಎನ್‍ಪಿಎಸ್ ನೌಕರರು ಕೆಲಸ ನಿರ್ವಹಿಸುತ್ತಿದ್ದು, ಎನ್.ಪಿ.ಎಸ್ ಪದ್ಧತಿ ಜಾರಿಯಿಂದಾಗಿಇವರ ಬದುಕು ಸಂಕಷ್ಟದಲ್ಲಿರುತ್ತದೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಶ್ರೀ ಸಾಮಾನ್ಯನಿಗೆ ತಲುಪಿಸುವಲ್ಲಿ ಇವರ ಪಾತ್ರ ಅತ್...

ಸರ್ಕಾರಿ ನೌಕರರು ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯ ಮಿತಿಯನ್ನು ನಿರ್ಬಂಧಿಸುವ ಸರ್ಕಾರಿ ಆದೇಶ ಬಗ್ಗೆ.

ಸರ್ಕಾರಿ ನೌಕರರು ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯ ಮಿತಿಯನ್ನು ನಿರ್ಬಂಧಿಸುವ ಸರ್ಕಾರಿ ಆದೇಶ ಬಗ್ಗೆ. ಸರ್ಕಾರದ ಆದೇಶ ಸಂ. ಆಇ 16 ಎಸ್ ಆರ್ ಎ 89 ದಿನಾಂಕ:-09-03-1989ರ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ಕ್ಯಾಲೆಂಡರ್ ವರ್ಷದಲ್ಲಿ 15 ದಿವಸಗಳ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಲಾಗಿತ್ತು, ನಂತರ, ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 02 ಹೆಚ್ ಹೆಚ್ ಎಲ್ 2019, ದಿನಾಂಕ: 13-6-2019 ರ ಆದೇಶದಲ್ಲಿ 15 ದಿವಸಗಳ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಿ ಆದೇಶಿಸಲಾಗಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ಅನುಬಂಧ-ಬಿ ಯ ನಿಯಮ (I) ರನ್ವಯ 15 ದಿವಸಗಳ ಸಾಂದರ್ಭಿಕ ರಜೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಒಂದು ಬಾರಿಗೆ  ಪಡೆಯಬುದಾದ ಗರಿಷ್ಠ ಸಾಂದರ್ಭಿಕ ರಜೆಯ ಮಿತಿಯನ್ನು 07 ದಿನಗಳಿಗೆ ಸೀಮಿತಗೊಳಿಸಿ, ಸಾರ್ವತ್ರಿಕ ರಜೆಯೊಂದಿಗೆ ಸಂಯೋಜಿಸಿದಾಗ ಈ ಅವಧಿಯನ್ನು 10 ದಿವಸಗಳಿಗೆ ನಿರ್ಭಂದಿಸಿ ಅವಕಾಶ ಕಲ್ಪಿಸಲಾಗಿತ್ತು. ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 02 ಹೆಚ್ ಹೆಚ್ ಎಲ್ 2019, ದಿನಾಂಕ: 13-6-2019 ರ ಆದೇಶದಲ್ಲಿ 15 ದಿವಸಗಳ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಲಾದ ಆದೇಶದಲ್ಲಿ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಿರುವ ಹಿನ್ನೆಲೆಯಲ್ಲಿ ಒಂದು ಬಾರಿಗೆ ಪಡೆಯಬಹುದಾದ ಗರಿಷ್ಠ ಸಾಂದರ್ಭಿಕ ರಜೆಯನ್ನು 05 ದಿನಗಳೆಂದು ನಿರ್ಬಂಧಿಸಲು ಹಾಗೂ ಸಾರ್ವತ್ರಿಕ...

ನಗದುರಹಿತ ಚಿಕಿತ್ಸೆ - ನೌಕರರ ಸ್ನೇಹಿ ಆರೋಗ್ಯ ಯೋಜನೆ ರಾಜ್ಯ ಸರ್ಕಾರಿ‌ ನೌಕರರ ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ಶೀಘ್ರದಲ್ಲೇ ಜಾರಿ.

ನಗದುರಹಿತ ಚಿಕಿತ್ಸೆ - ನೌಕರರ ಸ್ನೇಹಿ ಆರೋಗ್ಯ ಯೋಜನೆ ರಾಜ್ಯ ಸರ್ಕಾರಿ‌ ನೌಕರರ ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ಶೀಘ್ರದಲ್ಲೇ ಜಾರಿ. ಪ್ರಸ್ತುತ ಜಾರಿಯಲ್ಲಿರುವ  "ಆರೋಗ್ಯ ಸಂಜೀವಿನಿ"  ಆರೋಗ್ಯ ಯೋಜನೆಯು ರಾಜ್ಯದ ಸರ್ಕಾರಿ ನೌಕರರಿಗೆ ಹೆಚ್ಚು ಪ್ರಯೋಜನಕಾರಿಯಾಗಿ ಇರುವುದಿಲ್ಲ. ಇದನ್ನು ಮನಗಂಡ ಸಂಘವು ಈ ಆರೋಗ್ಯ ಯೋಜನಯಲ್ಲಿ ಹಲವಾರು ಮಾರ್ಪಾಡುಗಳನ್ನು ಮಾಡಿ ಒಂದು ಹೊಸ ಪ್ರಯೋಜನಕಾರಿ ಯೋಜನೆಯನ್ನು‌ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು. ನಗದು ರಹಿತ  ಆರೋಗ್ಯ ಚಿಕಿತ್ಸೆ ಯೋಜನೆಯ ಮುಖ್ಯಾಂಶಗಳು ಒಳರೋಗಿ - ಹೊರರೋಗಿ ಚಿಕಿತ್ಸಾ ವೆಚ್ಚ ಸಂಪೂರ್ಣ ನಗದುರಹಿತ. ಎಲ್ಲಾ ವಿಧದ ಮೆಡಿಕಲ್ ಇಮೇಜಿಂಗ್ (ಸ್ಕ್ಯಾನಿಂಗ್), ಲ್ಯಾಬೋರೇಟರಿ ಪರೀಕ್ಷೆಗಳು ಒಳಗೊಂಡಂತೆ ಔಷಧಿಗಳು ಸಹ ಈ ಯೋಜನೆ ಅಡಿ ಉಚಿತವಾಗಿ ಲಭ್ಯವಾಗಲಿದೆ. ಈ ಯೋಜನೆಯಡಿಯಲ್ಲಿ Organ Transplantation ಗೂ ಸಹ ಅವಕಾಶ ಕಲ್ಪಿಸಲಾಗಿದೆ. ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ಸೇವೆಗೂ ಅವಕಾಶ ಮಾಡಿಕೊಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ ನಮ್ಮ ರಾಜ್ಯವು ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ಸರ್ಕಾರಿ ನೌಕರರಿಗೆ ಇಂತಹ ವಿಶಿಷ್ಟವಾದ ನಗದುರಹಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮನವಿಗೆ ಸ್ಪಂದಿಸಿರುವ‌ ಸರ್ಕಾರವು  ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ನಗದುರಹ...

ಕೇಂದ್ರ ಸರ್ಕಾರಿ ನೌಕರರಿಗೆ ಶೇ.4% ರಷ್ಟು ತುಟ್ಟಿ ಭತ್ಯೆ (ಡಿ.ಎ) ಹೆಚ್ಚಳ- ವದಂತಿ.

 ಕೇಂದ್ರ ಸರ್ಕಾರಿ ನೌಕರರಿಗೆ ಶೇ.4% ರಷ್ಟು ತುಟ್ಟಿ ಭತ್ಯೆ (ಡಿ.ಎ) ಹೆಚ್ಚಳ- ವದಂತಿ. ಕೇಂದ್ರ ಸರ್ಕಾರಿ ನೌಕರರಿಗೆ ಶೇ .4% ರಷ್ಟು ತುಟ್ಟಿ ಭತ್ಯೆ ( ಡಿ . ಎ ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ದಿನಾಂಕ : 13/03/2020 ರಂದು ಅನುಮೋದನೆ ನೀಡಿರುತ್ತದೆ . ಆದರೆ ಕೇಂದ್ರ ಸರ್ಕಾರವು ದೇಶದ್ಯಂತ ಲಾಕ್ ಡೌನ್ ಘೋಷಿಸಿದ ನಂತರದ ದಿನದಲ್ಲಿ ಈ ಬಗ್ಗೆ ಯಾವುದೇ ಅಧಿಕೃತ ಆದೇಶವನ್ನು ಹೊರಡಿಸಿರುವುದಿಲ್ಲ . ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಕೇಂದ್ರ ಸಚಿವರ ಕೇಂದ್ರ ಸರ್ಕಾರಿ ನೌಕರರಿಗೆ ಶೇ .4% ರಷ್ಟು ತುಟ್ಟಿ ಭತ್ಯೆ ( ಡಿ . ಎ ) ಹೆಚ್ಚಳ   ಮಾಡಿರುವ ಬಗ್ಗೆ ಸುದ್ದಿಗೋಷ್ಠಿ ನಡೆಸುತ್ತಿರುವ ವಿಡಿಯೋ ಖಾಸಗಿ ವಾಹಿನಿ ( ಹಿಂದುಸ್ತಾನ ಟೈಮ್ಸ್ ) ನಿಂದ ದಿನಾಂಕ : 13-03-2020 ರಂದು   ಪ್ರಕಟಿಸಲಾಗಿದೆ .  >   Press Meet Video ಪ್ರಸ್ತುತ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಯಾವುದೇ ತುಟ್ಟಿ ಭತ್ಯೆಯನ್ನು ನೀಡುವ ಆದೇಶ ಅಥವಾ ಸಚಿವ ಸಂಪುಟ ಅನುಮೋದನೆಯನ್ನು ನೀಡಿರುವ ಬಗ್ಗೆ ಧೃಡ ಮಾಹಿತಿಯು ಇರುವುದಿಲ್ಲ .   ಹೆ ಚ್ಚಿ ನ   ಮಾಹಿತಿಗಾಗಿ  ಸಂಪರ್ಕಿಸಿ Facebook           Telegram:t.me/ksgeaba...

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers