Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

"ಕೆ.ಜಿ.ಐ.ಡಿ ಸಮಸ್ಯೆ ಶೀಘ್ರ ಇತ್ಯರ್ಥ" -ಸಿ ಎಸ್ ಷಡಾಕ್ಷರಿ.

 

"ಕೆ.ಜಿ.ಐ.ಡಿ ಸಮಸ್ಯೆ ಶೀಘ್ರ ಇತ್ಯರ್ಥ"  - ಸಿ.ಎಸ್ ಷಡಾಕ್ಷರಿ


ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆ.ಜಿ.ಐ.ಡಿ ಇಲಾಖೆಯ ಗಣಕೀಕರಣ ಕಾರ್ಯದ ಪ್ರಗತಿ ಹಾಗೂ ಇಲಾಖೆಯನ್ನು ಸಬಲೀಕರಣಗೊಳಿಸುವ ಮೂಲಕ ಕೆ.ಜಿ.ಐ.ಡಿ ಇಲಾಖೆಯಲ್ಲಿರುವ ಜ್ವಲಂತ ಸಮಸ್ಯೆಗಳನ್ನು ಶೀಘ್ರವೇ ಸರಿಪಡಿಸಲಾಗುವುದೆಂದು ರಾಜ್ಯಾಧ್ಯಕ್ಷರಾದ ಷಡಾಕ್ಷರಿರವರು ತಿಳಿಸಿದರು. 

ಸಂಘದ ಮನವಿ ಮೇರೆಗೆ ಕೆ.ಜಿ.ಐ.ಡಿ  ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯ ನಂತರ ಅವರು ಮಾತನಾಡಿದರು.

ಹೊಸ ಪಾಲಿಸಿಗಳ ವಿತರಣೆ,ಪಾಲಿಸಿಗಳ ಮೇಲಿನ ಸಾಲ,ಮೆಚುರಿಟಿ ಕ್ಲೈಮು ಹಾಗೂ ಬೋನಸ್ ವಿತರಣೆಯಲ್ಲಿ ಉಂಟಾಗುತ್ತಿರುವ ಅನಗತ್ಯ ವಿಳಂಬದಿಂದಾಗಿ ನೌಕರರು ಅನುಭವಿಸುತ್ತಿರುವ ತೊಂದರೆಗಳನ್ನು ಶೀಘ್ರ ಇತ್ಯರ್ಥಪಡಿಸಲಾಗುವುದು ಎಂದರು.


ಇಲಾಖೆಯ ಗಣಕೀಕರಣ ಸಂಪೂರ್ಣಗೊಂಡ ನಂತರ ಸಾಲ, ಫಲಪ್ರದಗೊಂಡ ಪಾಲಿಸಿಗಳ ಅಂತಿಮ ಇತ್ಯರ್ಥ, ಹೊಸ ಪಾಲಿಸಿ, ಬೋನಸ್-ಮುಂತಾದ ಸೌಲಭ್ಯಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಸಾಲದ ಅರ್ಜಿ ಒಳಗೊಂಡಂತೆ ಇತ್ಯಾದಿ ಸೌಲಭ್ಯ ಕೋರಿ ಸಲ್ಲಿಸುವ ಮನವಿಗಳನ್ನು ಸಣ್ಣಪುಟ್ಟ ಕಾರಣಗಳಿಗಾಗಿ ಆಕ್ಷೇಪಣೆಯೊಂದಿಗೆ ಹಿಂದಿರುಗಿಸದೆ ಅರ್ಜಿದಾರರ ಮನವಿಯಲ್ಲಿ ನಮೂದಾಗಿರುವ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಮಾಹಿತಿ ಪಡೆದು ಇತ್ಯರ್ಥಪಡಿಸುವಂತೆ ಮನವಿ ಮಾಡಲಾಗಿದೆ. 

ಈಗಾಗಲೇ ಶೇಕಡಾ 60 ರಷ್ಟು ಬೋನಸ್ ವಿತರಿಸಲಾಗಿದ್ದು, ಅತಿ ಶೀಘ್ರದಲ್ಲಿ ಶೇಕಡಾ  💯 ಕ್ಕೆ 💯 ರಷ್ಟು ಬೋನಸ್ ಕಡತಗಳನ್ನು ಇತ್ಯರ್ಥಪಡಿಸುವಂತೆಯೂ ಮನವಿ ಮಾಡಲಾಗಿದೆ ಎಂದರು. 

ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಮಾನ್ಯ ನಿರ್ದೇಶಕರು ಕೂಡಲೆ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದೆಂದು ಹಾಗೂ ಗಣಕೀಕರಣ ಕಾರ್ಯಕ್ಕೆ ಇರುವ ಅಡೆ-ತಡೆಗಳ ನಿವಾರಣೆಗೆ ಸಹಕರಿಸುವಂತೆ ನಿರ್ದೇಶಕರು ಮನವಿ ಮಾಡಿದ್ದು, ಈ ಬಗ್ಗೆ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸಲಾಗುವುದೆಂದರು.

ಈ ಸಂದರ್ಭದಲ್ಲಿ ಕೋಶಾಧ್ಯಕ್ಷರಾದ ಆರ್ ಶ್ರೀನಿವಾಸ್, ಗೌರವಾಧದ್ಯಕ್ಷರಾದ ಶಿವರುದ್ರಯ್ಯ, ಉಪಾಧ್ಯಕ್ಷರಾದ ಬಸವರಾಜ್, ರುದ್ರಪ್ಪ , ಹರ್ಷ, ಪದಾಧಿಕಾರಿಗಳಾದ ಮೋಹನ್ ಕುಮಾರ್,ಶ್ರೀಧರ್, ವೆಂಕಟಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

Facebook         Telegram,      Blogspot.     Website.    WhatsApp      Youtube 

@syedKSGEA

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers