Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

"ರಾಜ್ಯ ಸರ್ಕಾರಿ‌ ನೌಕರರ ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ನಗದುರಹಿತ ಚಿಕಿತ್ಸೆ - ನೌಕರರ ಸ್ನೇಹಿ ಆರೋಗ್ಯ ಯೋಜನೆ" ಶೀಘ್ರದಲ್ಲೇ ಜಾರಿ.

ರಾಜ್ಯ ಸರ್ಕಾರಿ‌ ನೌಕರರ ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ನಗದುರಹಿತ ಚಿಕಿತ್ಸೆ - ನೌಕರರ ಸ್ನೇಹಿ ಆರೋಗ್ಯ ಯೋಜನೆ" ಶೀಘ್ರದಲ್ಲೇ ಜಾರಿ."


ಪ್ರಸ್ತುತ ಜಾರಿಯಲ್ಲಿರುವ "ಆರೋಗ್ಯ ಸಂಜೀವಿನಿ" ಆರೋಗ್ಯ ಯೋಜನೆಯು ರಾಜ್ಯದ ಸರ್ಕಾರಿ ನೌಕರರಿಗೆ ಹೆಚ್ಚು ಪ್ರಯೋಜನಕಾರಿಯಾಗಿ ಇರುವುದಿಲ್ಲ. ಇದನ್ನು ಮನಗಂಡ ಸಂಘವು ಈ ಆರೋಗ್ಯ ಯೋಜನಯಲ್ಲಿ ಹಲವಾರು ಮಾರ್ಪಾಡುಗಳನ್ನು ಮಾಡಿ ಒಂದು ಹೊಸ ಪ್ರಯೋಜನಕಾರಿ ಯೋಜನೆಯನ್ನು‌ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು.

ಮನವಿಗೆ ಸ್ಪಂದಿಸಿರುವ‌ ಸರ್ಕಾರವು ಎಲ್ಲಾ ಶಸ್ತ್ರ ಚಿಕಿತ್ಸೆ ಹಾಗೂ ಕಾಯಿಲೆಗಳಿಗೆ ನಗದುರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ನೂತನ ‌ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಕಳೆದ ಬಜೆಟ್ ನಲ್ಲಿ ರೂ. 50.00 ಕೋಟಿ ಹಣವನ್ನು ಮೀಸಲಿರಿತ್ತು.

ಈ ಯೋಜನೆಯ ಅನುಷ್ಠಾನಗೊಳಿಸಲು ತಜ್ಞರೊಂದಿಗೆ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಸುಧೀರ್ಘವಾದ ಸಮಾಲೋಚನೆ ನಡೆಸಿದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

Facebook         Telegram,      Blogspot.     Website.    WhatsApp      Youtube 

@syedKSGEA


Comments

  1. ಸರ್, ksgea ಕೈ ಗೊಳ್ಳುತ್ತಿರುವ ಪ್ರತಿಯೊಂದು ಕೆಲಸಕ್ಕೆ... ಘನ ಸರಕಾರ ಪಾಸಿಟಿವ್ ಅಟ್ಟಿಟ್ಯೂಡ್ ನಲ್ಲಿ ಸಾಗುವಂತೆ ಮಾಡುತ್ತಿರೋ..... ನಮ್ಮ ಹೆಮ್ಮೆಯ ರಾಜ್ಯಾಧ್ಯಕ್ಷ ರಾದ.... ಶ್ರೀ C.S. ಷಡಕ್ಷರಿ ಸರ್ & ತಂಡಕ್ಕೆ........
    ಅಭಿನಂದನೆಗಳು.
    ಇನ್ನೊಂದು ಚಿಕ್ಕ ಬೇಡಿಕೆ ತಮ್ಮ ಆದ್ಯ ಗಮನಕ್ಕೆ ಸರ್......
    ಪ್ರಾಥಮಿಕ ಶಾಲಾ B.Ed spl -2015-17 ರ ಬ್ಯಾಚ್ ನ ಎಲ್ಲಾ 250 ಶಿಕ್ಷಕರು....
    2-ಸಾಮಾನ್ಯ ಮೆಥಡ್ & ಒಂದು ಸ್ಪೆಷಲ್ ಮೆಥಡ್ ನಲ್ಲಿ ನಮ್ಮದೊಂದೇ ಬ್ಯಾಚ್ ಈ ರೀತಿ B.Ed ಕಂಪ್ಲೀಟ್ ಮಾಡಿದ್ದು....(ಹಿಂದಿನ 2009 ರಿಂದ2014 ರ ವರೆಗೂ ಕೇವಲ ಸಿಂಗಲ್ ಮೆಥಡ್ ಇತ್ತು ಸರ್)
    ನಮ್ಮ ಟೀಮ್ ಗೆ... ಹೈ ಸ್ಕೂಲ್ ಗೆ ಭಡ್ತಿ ಗೆ ಸಾಮಾನ್ಯ b. Ed ನವರ ಜೊತೆಗೆ ಪರಿಗಣಿಸುವಂತೆ, ಇಲ್ಲವೇ.....
    ರಾಜ್ಯದ BRC ಗಳಲ್ಲಿ ಖಾಲಿ ಇರುವ IERT ಪ್ರೌಢ ಹುದ್ದೆಗೆ ನೇರವಾಗಿ ಪದೋನ್ನತಿ ನೀಡುವಂತೆ... ಮಾನ್ಯ ಆಯುಕ್ತರು ಸಾ. ಶಿ. ಇ. ರವರಿಗೆ ಶಿಫಾರಸ್ಸು ಮಾಡಿ ನಮ್ಮ ತಂಡಕ್ಕೆ ಆಶೀರ್ವಾದ ಮಾಡುವಿರೆಂದು ಕೋರುವೆ.
    ಅಭಿಮಾನದೊಂದಿಗೆ....
    ತಮ್ಮ ನಂಬಿಗೆಯ,
    N. N.ಅಣ್ಣೇರ್, HM.
    GovtHP ಸ್ಕೂಲ್, ರಾಣೇಬೆನ್ನೂರ್

    ReplyDelete

Post a Comment

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers