Skip to main content

Posts

Showing posts from 2021

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

2022ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಮಾಡಿಕೊಳ್ಳಲು ಆದೇಶ - ಸರ್ಕಾರಕ್ಕೆ ಧನ್ಯವಾದ ಗಳು ಶ್ರೀ ಸಿ.ಎಸ್. ಷಡಾಕ್ಷರಿ. ರಾಜ್ಯಾಧ್ಯಕ್ಷರು, ಕ.ರಾ.ಸ.ನೌಕರರ ಸಂಘ, ಬೆಂಗಳೂರು.

2022ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಮಾಡಿಕೊಳ್ಳಲು  ಆದೇಶ  ಸಂಘದ ಮನವಿಯಂತೆ ರಾಜ್ಯ ಸರ್ಕಾರಿ ನೌಕರರ 2022ನೇ ಸಾಲಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಮಾಡಿಕೊಳ್ಳುವ  ಆದೇಶ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳು.

ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಮಂಜೂರಾತಿಗೆ ಸರ್ಕಾರವನ್ನು ಒತ್ತಾಯಿಸಿ ಪ್ರಥಮ ಹಂತದ ಕಾರ್ಯಕ್ರಮ

  ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಮಂಜೂರಾತಿಗೆ ಸರ್ಕಾರವನ್ನು ಒತ್ತಾಯಿಸಿ ಪ್ರಥಮ ಹಂತದ ಕಾರ್ಯಕ್ರಮ           ದಿನಾಂಕ: 10-10-2021ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯು ಕೇಂದ್ರ ಸರ್ಕಾರಿ ನೌಕರರು ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳಲ್ಲಿ ಸಮಾನತೆಯನ್ನು ಮೂಡಿಸುವ ನಿಟ್ಟಿನಲ್ಲಿ ಸರ್ಕಾರವನ್ನು ಒತ್ತಾಯಿಸಲು ಹಂತ ಹಂತದ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿದ್ದು, ರಾಜ್ಯ ಪರಿಷತ್ ಮಹಾಸಭೆ ತೀರ್ಮಾನದಂತೆ, ಸಂಘದ ಪ್ರಮುಖ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು 2021ನೇ ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆಗಳು ಹಾಗೂ ಕೇಂದ್ರ ಸಂಘದ ವತಿಯಿಂದ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ಬೇಡಿಕೆಗಳ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ತೀಮಾನಿಸಿ ಈ ನಿಟ್ಟಿನಲ್ಲಿ ಸಂಘವು ಕಾರ್ಯೋನ್ಮುಖವಾಗಿರುತ್ತದೆ. ಬೇಡಿಕೆಗಳು           • ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆಗಳನ್ನು ಮಂಜೂರು ಮಾಡುವುದು.     ...

ಹಬ್ಬದ ಮುಂಗಡ(FA)ರೂ.10,000ಗಳಿಂದ 25,000 ಗಳಿಗೆ ಹೆಚ್ಚಳ - ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳು-ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು

ಸಂಘದ ಮನವಿಗೆ ಸ್ಪಂದಿಸಿ , “ ರಾಜ್ಯ ಸರ್ಕಾರಿ ನೌಕರರ ಇತಿಹಾಸದಲ್ಲೇ ಅತೀ ಕಡಿಮೆ ಅವಧಿಯಲ್ಲಿ ಹೆಚ್ಚು ಪ್ರಮಾಣದ ಹಬ್ಬದ ಮುಂಗಡ ಮೊತ್ತವನ್ನು ಹೆಚ್ಚಳ ಮಾಡಿರುವುದು ಇದೇ ಮೊದಲು ಹಾಗಾಗೀ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಸವರಾಜ ಬೊಮ್ಮಾಯಿರವರಿಗೆ , ಸಚಿವ ಸಂಪುಟದ ಸಚಿವರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತದೆ ” ಸರ್ಕಾರಿ ನೌಕರರು ಹಬ್ಬಗಳನ್ನು ಆಚರಿಸಲು ಹಾಲಿ ಇರುವ ಹಬ್ಬದ ಮುಂಗಡ(FA) ರೂ. 10,000 ಗಳಿಂದ 25,000ಗಳಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ರವರಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಅಭಿನಂದನೆಗಳು -  ಸಿ.ಎಸ್. ಷಡಾಕ್ಷರಿ,  ರಾಜ್ಯಾಧ್ಯಕ್ಷರು 

ಸಿಆರ್ ಪಿ ಮತ್ತು ಬಿ ಆರ್ ಪಿ ಅವರಿಗೆ ತಾಲೂಕಿನ ಒಳಗೆ ಸ್ಥಳ ನಿಯುಕ್ತಿ ಮಾಡುವ ಬಗ್ಗೆ

ಸರಕಾರಿ ನೌಕರರ ಸಂಘದ ಮನವಿಯ ಫಲಶ್ರುತಿ 🪴🪴🪴🪴🪴🪴🪴 ನಿನ್ನೆಯ ದಿನ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿಯವರು 🌹🌹🌹🌹🌹🌹🌹  ಸಿಆರ್ ಪಿ  ಮತ್ತು ಬಿ ಆರ್ ಪಿ  ಅವರಿಗೆ ತಾಲೂಕಿನ ಒಳಗೆ ಸ್ಥಳ ನಿಯುಕ್ತಿ ಮಾಡುವಂತೆಮನವಿಯನ್ನು ಮಾನ್ಯ ಶಿಕ್ಷಣ  ಸಚಿವರಿಗೆ ಮನವಿ ಮಾಡಿದ ಪ್ರಯುಕ್ತ  ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಅವರಿಗೆ ಶಿಕ್ಷಣ ಸಚಿವರು ಟಿಪ್ಪಣಿ‌ ಮೂಲಕ ನಿರ್ದೇಶನ ಮಾಡಿದ್ದಾರೆ

ಹಬ್ಬದ ಮುಂಗಡದ ಬಗ್ಗೆ ಮಾಹಿತಿ-ಸರ್ಕಾರಿ ನೌಕರರ ಆದ್ಯ ಗಮನಕ್ಕೆ

 ಹಬ್ಬದ ಮುಂಗಡದ ಬಗ್ಗೆ ಮಾಹಿತಿ-ಸರ್ಕಾರಿ ನೌಕರರ ಆದ್ಯ ಗಮನಕ್ಕೆ ಸರ್ಕಾರಿ ನೌಕರರು ಹಬ್ಬಗಳನ್ನು ಆಚರಿಸಲು ಹಾಲಿ ಇರುವ ಹಬ್ಬದ ಮುಂಗಡ ರೂ. 10,000/- ಗಳಿಂದ 25,000/- ಗಳಿಗೆ ಹೆಚ್ಚಳ ಮಾಡುವಂತೆ ಸಂಘದಿAದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದು ಸಕರಾತ್ಮಕವಾಗಿ ಸ್ಪಂದಿಸಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮಾನ್ಯ ಗೃಹ ಸಚಿವರಿಗೆ ಮನವಿ

ರಾಜ್ಯ ಸರ್ಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮಾನ್ಯ ಗೃಹ ಸಚಿವರಿಗೆ ಮನವಿ  ಅಕ್ರಮ ಮರಳು ಸಾಗಾಣಿಕೆಗೆ ತಡೆಯೊಡ್ಡಿದ ಎತ್ತಿನಬೂದಿಹಾಳ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವೆಂಕಟಸ್ವಾಮಿ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಮಾನ್ಯ ಗೃಹ ಸಚಿವರಾದ ಶ್ರೀಯುತ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಯಿತು. ತಕ್ಷಣಕ್ಕೆ ಸ್ಪಂದಿಸಿದ ಮಾನ್ಯ ಗೃಹ ಸಚಿವರು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಕರೆಮಾಡಿ ಹಲ್ಲೆಗೆ ಕಾರಣರಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಅಗತ್ಯ ಕಾನೂನು ಕ್ರಮವನ್ನು ಜರುಗಿಸುವಂತೆ ಸೂಚಿಸಿದರು

ರಾಮನಗರ ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಕೆ. ಬೈರಲಿಂಗಯ್ಯ ಅವರ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ

ರಾಮನಗರ ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಕೆ. ಬೈರಲಿಂಗಯ್ಯ ಅವರ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಮನಗರ ಶಾಖೆಯ ಜಿಲ್ಲಾಧ್ಯಕ್ಷರಾದ ಶ್ರೀಯುತ ಆರ್.ಕೆ.ಬೈರಲಿಂಗಯ್ಯನವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಶ್ರೀ ಆರ್.ಕೆ. ಬೈರಲಿಂಗಯ್ಯನವರನ್ನು ಅಭಿನಂದಿಸುವ ಮೂಲಕ ವಯೋನಿವೃತ್ತಿ ಜೀವನಕ್ಕೆ ಶುಭ ಕೋರಿದರು  . ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ತಿಮ್ಮೇಗೌಡ , ಖಜಾಂಚಿಗಳಾದ ಆರ್ ಶ್ರೀನಿವಾಸ್ ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಎಂ . ಬಳ್ಳಾರಿ , ಉಪಾಧ್ಯಕ್ಷರಾದ ಗಿರಿಗೌಡ , ದಿನೇಶ್ , ಮೋಹನ್ ಕುಮಾರ್ , ಮಾಲತೇಶ್ , ಶಿವಲಿಂಗಯ್ಯ ಚೇತನ್ ರಾಜ್ ರವರು ಉಪಸ್ಥಿತರಿದ್ದರು .  ರಾಮನಗರ ಜಿಲ್ಲಾ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಶ್ರೀ ಸತೀಶ್ ಅವರು ಸ್ವಾಗತಿಸಿ , ಕಾರ್ಯದರ್ಶಿಗಳಾದ ಶ್ರೀ ರಾಜೇಗೌಡರು ವಂದಿಸಿದರು . @DinoMedia

ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಯ ಪರಿಷ್ಕೃತ ವೇಳಾ ಪಟ್ಟಿ

ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಯ ಪರಿಷ್ಕೃತ ವೇಳಾ ಪಟ್ಟಿ ಪರಿಷ್ಕೃತ ವೇಳಾ ಪಟ್ಟಿ 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು / ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು / ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಮುಂದುವರೆಸಿ ಹಮ್ಮಿಕೊಳ್ಳಲು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸುವ ಬಗ್ಗೆ

ಶೀಘ್ರದಲ್ಲೇ KGID ಬೋನಸ್ - ಕೆ.ಜಿ.ಐ.ಡಿ. ಇಲಾಖೆಯ ಸಂಪೂರ್ಣ ಗಣಕೀಕೃತ ವೆಬ್ ಸೈಟ್ ಸದ್ಯದಲ್ಲೇ ‌ಲೋಕಾರ್ಪಣೆ. - ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು, ಕ.ರಾ.ಸ.ನೌ.ಸಂಘ, ಬೆಂಗಳೂರು.

ಶೀಘ್ರದಲ್ಲೇ KGID ಬೋನಸ್ - ಕೆ.ಜಿ.ಐ.ಡಿ. ಇಲಾಖೆಯ ಸಂಪೂರ್ಣ ಗಣಕೀಕೃತ ವೆಬ್ ಸೈಟ್ ಸದ್ಯದಲ್ಲೇ ‌ಲೋಕಾರ್ಪಣೆ. - ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು, ಕ.ರಾ.ಸ.ನೌ.ಸಂಘ, ಬೆಂಗಳೂರು. ಪ್ರಸ್ತುತ ಪಾಲಿಸಿ ಪಡೆದಿರುವ ವಿಮಾದಾರರಿಗೆ ಲಭ್ಯವಾಗುವ ಸೇವೆಗಳು - ವಿಮಾದಾರರು ಸಹಾಯವಾಣಿಗೆ ಕರೆಮಾಡಿ ಅವರ ಪಾಲಿಸಿಗೆ ಮೊಬೈಲ್ ಸಂಖ್ಯೆ ಮತ್ತು ಇ - ಮೇಲ್ ವಿಳಾಸಗಳನ್ನು ಆಸ್ ಡೇಟ್ ಮಾಡಿಸಬಹುದು .  ಹೊಸದಾಗಿ ಸರ್ಕಾರಿ ಸೇವೆಗೆ ನೇಮಕವಾಗಿರುವ ಸರ್ಕಾರಿ ನೌಕರರಿಗೆ ಲಭ್ಯವಾಗುವ ಸೇವೆಗಳು ಪ್ರಥಮ ಬಾರಿಗೆ ಪಾಲಿಸಿ ಪಡೆಯಬ ನಮೂನೆ ಭರ್ತಿ ಮಾಡಲು , ಪ್ರಸ್ತಾವನೆ ಆಕ್ಷೇಪಣೆಗೊಂಡ ಸಂದರ್ಭಗಳಲ್ಲಿ ಸಹಾಯವಾಣಿ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬಹುದು . KGID - ಗಣಕೀಕೃತ ವ್ಯವಸ್ಥೆಯ ಪ್ರಗತಿ ನೋಟ  ವಿಮಾದಾರರು ಪಾಲಿಸಿ ವಿವರಗಳನ್ನು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು . ಹೊಸದಾಗಿ ರಾಜ್ಯ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಜೀವ ವಿಮಾ ಪಾಲಿಸಿ ನೀಡಲಾಗುತ್ತಿದ್ದು , ಪ್ರಸ್ತುತ 4900 ಪಾಲಿಸಿಗಳನ್ನು ನೀಡಲಾಗಿದೆ . ಈಗಾಗಲೇ ಪಾಲಿಸಿಯನ್ನು ಹೊಂದಿರುವ ನೌಕರರಿಗೆ ವಿಮಾದಾರರಿಗೂ ಸಹ ಈ ಸೇವೆಯನ್ನು ವಿಸ್ತರಿಸಲಾಗುವುದು .  ವಿಮಾದಾರರು ಪಾವತಿಸಿರುವ ವಿಮಾ ಕಂತುಗಳು , ಸಾಲದ ಕಂತುಗಳು ಮತ್ತು ಪಾಲಿಸಿಗಳ ಡೇಟಾ ಮರ್ಜಿಂಗ್ ಕಾರ್ಯ ಪ್ರಗತಿಯಲ್ಲಿದ್ದು , ಶೀಘ್ರದಲ್ಲೇ Loan ಮತ್ತು Claim ಗಳ ಇತ್ಯರ್ಥ ಸೇವೆಯನ್ನು ವಿಮಾದಾರರಿಗೆ ನೀಡು...

ಪ್ರಾಥಮಿಕ ಶಾಲಾ ಶಿಕ್ಷಕರ ಆದ್ಯ ಗಮನಕ್ಕೆ ....

ಪ್ರಾಥಮಿಕ ಶಾಲಾ ಶಿಕ್ಷಕರ ಆದ್ಯ ಗಮನಕ್ಕೆ ....  ನಿನ್ನೆಯಿಂದ ಸಾವಿರಾರು ಜನ ರಾಜ್ಯದ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಶಿಕ್ಷಕರು ದೂರವಾಣಿಯ ಮೂಲಕ ಸಂಘಕ್ಕೆ ಒತ್ತಡ ಹಾಗೂ ಮನವಿಯನ್ನು ಸಲ್ಲಿಸುತ್ತಾ , ಶಿಕ್ಷಣ ಇಲಾಖೆಯು ಇತ್ತೀಚೆಗೆ ನೀಡಿರುವ ಸ್ಪಷ್ಟಿಕರಣದಂತೆ ಆಯಾ ತಾಲ್ಲೂಕಿನ ( Working strength ) ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಯನ್ನು ಆಧರಿಸಿದಾಗ ಬಹಳಷ್ಟು ತಾಲ್ಲೂಕುಗಳ ಶಿಕ್ಷಕರಿಗೆ ವರ್ಗಾವಣೆ ಆವಕಾಶಗಳು ಸಿಗದೇ ವಂಚಿತರಾಗುತ್ತಿರುವ ಅಂಶವನ್ನು ಸಂಘದ ಗಮನಕ್ಕೆ ತಂದಿರುತ್ತಾರೆ . 9 : 23-11-21 ಈಗಾಗಲೇ ಆದೇ ತಾಲ್ಲೂಕುಗಳಲ್ಲಿ ಕಡ್ಡಾಯ / ಹೆಚ್ಚುವರಿ ವರ್ಗಾವಣೆಗೆ ಅವಕಾಶಗಳನ್ನು ನೀಡಿದ್ದು , ಈಗ ನಮಗೆ ನೀಡದಿರುವುದು ನೋವಿನ ಸಂಗತಿ ಎಂಬ ಅಂಶವನ್ನು ರಾಜ್ಯದ ಶಿಕ್ಷಣ ಸಚಿವರಿಗೆ ಹಾಗೂ ಶಿಕ್ಷಣ ಇಲಾಖೆಯ ಕಾರ್ಯದರ್ಶಿ / ಆಯುಕ್ತರಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು , ಗಮನಕ್ಕೆ ತಂದಾಗ ಅವರುಗಳು ಸಹ ಈ ಬಗ್ಗೆ ಸಹಾನುಭೂತಿಯಿಂದ ಸಹಕರಿಸಿರುತ್ತಾರೆ . ದಿನಾಂಕ : 24-11-2021ರಂದು ನಡೆಯಲಿರುವ ವರ್ಗಾವಣೆ ಪ್ರಕ್ರಿಯೆಯಲ್ಲಿ ತಾಲ್ಲೂಕುಗಳ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳಿಗೆ ಬದಲಾಗಿ ಆಯಾ ತಾಲ್ಲೂಕುಗಳಲ್ಲಿನ ( sanction strength ) ಮಂಜೂರಾದ ಹುದ್ದೆಗಳಿಗೆ ಎಂಬ ತೀರ್ಮಾನವನ್ನು ಕೈಗೊಳ್ಳಬೇಕು ಎಂದು ವಿನಂತಿಸಿದಾಗ ಸರ್ಕಾರವು ಸಕಾರತ್ಮಕವಾಗಿ ಸ್ಪಂದಿಸಿ , sanction strength ಗಳ ಆಧಾರದ...

ರಾಜ್ಯದ ಶಾಲಾ ಶಿಕ್ಷಕರ ಆದ್ಯ ಗಮನಕ್ಕೆ....

 ರಾಜ್ಯದ ಶಾಲಾ ಶಿಕ್ಷಕರ ಆದ್ಯ ಗಮನಕ್ಕೆ.... ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ಕೆಳಕಂಡ ಶಾಲಾ ಉಸ್ತುವಾರಿ ಖಾಲಿ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡುವ ಬಗ್ಗೆ.    ಪ್ರಾಥಮಿಕ ಶಾಲಾ ವಿಭಾಗ:  CRP, BRP ಪ್ರೌಢ ಶಾಲಾ ವಿಭಾಗ:  BRP, ECO ಪ್ರೌಢ ಶಾಲಾ ಮುಖ್ಯ ಶಿಕ್ಷಕರ ವಿಭಾಗ:  BRC, Subj-Insp, Ad-Mid-day Meal,  APC - RMSA • 05 ವರ್ಷಗಳ ಅವಧಿಗೆ ಖಾಲಿಯಿರುವ ಸುಮಾರು 1000 ಹುದ್ದೆಗಳಿಗೆ ಲಿಖಿತ ಪರೀಕ್ಷೇಯ ಮೂಲಕ ಆಯ್ಕೆ ಮಾಡಲು ಉದ್ದೇಶಿಸಲಾಗಿದೆ.  • ಪರೀಕ್ಷೆಯನ್ನು ಎಸ್.ಎಸ್.ಎಲ್.ಸಿ. ಪರೀಕ್ಷಾ ಮಂಡಳಿಯ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. • ಪರೀಕ್ಷೆಗಳು ಡಿಸೆಂಬರ್ ಮಾಹೆಯಲ್ಲಿ ನಡೆಯಬಹುದಾಗಿದ್ದು, ಶಿಕ್ಷಕರು ಈ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳುವುದು.  • ಈ ಬಗ್ಗೆ ಇಲಾಖೆಯಲ್ಲಿ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಶಿಕ್ಷಣ ಇಲಾಖೆಯು ಸದ್ಯದಲ್ಲೇ ಅಧಿಸೂಚನೆಯನ್ನು ಹೊರಡಿಸಲಿದೆ.  

ರಾಜ್ಯ ಸರ್ಕಾರಿ ನೌಕರರ ಹಬ್ಬದ ಮುಂಗಡ ಮೊತ್ತವನ್ನು ಹೆಚ್ಚಳ ಮಾಡುವ ಬಗ್ಗೆ .

ರಾಜ್ಯ ಸರ್ಕಾರಿ ನೌಕರರ ಹಬ್ಬದ ಮುಂಗಡ ಮೊತ್ತವನ್ನು ಹೆಚ್ಚಳ ಮಾಡುವ ಬಗ್ಗೆ . ರಾಜ್ಯ ಸರ್ಕಾರವು ಪ್ರಸ್ತುತ ರಾಜ್ಯ ಸರ್ಕಾರಿ ನೌಕರರಿಗೆ ರೂ . 10,000 / -ಗಳ ಹಬ್ಬದ ಮುಂಗಡವನ್ನು ನೀಡುತ್ತಿದ್ದು , ದಿನಾಂಕ : 28-10-2021ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಮುಂಗಡವನ್ನು ಸಭೆಯಲ್ಲಿ , ಪ್ರಸ್ತುತ ನೀಡಲಾಗುತ್ತಿರುವ ಹಬ್ಬದ ಪರಿಸ್ಥಿತಿಗನುಗುಣವಾಗಿ ಪರಿಷ್ಕರಿಸಿ ಕನಿಷ್ಠ 25,000 / -ಗಳಿಗೆ ಹೆಚ್ಚಳ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ . ಇಂದಿನ ಸಮಿತಿ ಮೇಲಿನ ಅಂಶಗಳ ಹಿನ್ನೆಲೆಯಲ್ಲಿ , ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ನಿರ್ಣಯದಂತೆ ಪ್ರಸ್ತುತ ಪರಿಸ್ಥಿತಿಗನುಗುಣವಾಗಿ ಹಬ್ಬದ ಮುಂಗಡ ಮೊತ್ತವನ್ನು ರೂ .10,000 / ಗಳಿಂದ ರೂ . 25,000 / -ಗಳಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲು ಕೋರಿದೆ. - ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು.

2021ನೇ ಏಪ್ರಿಲ್ ಪೂರ್ವದಲ್ಲಿ ಬಾಕಿ ಇರುವ ಎಲ್ಲಾ ವಿಧದ ಅರಿಯರ್ಸ ಬಿಲ್‌ಗಳನ್ನು ಪಾವತಿಸಲು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಾಕಿ ಬಿಲ್ಲುಗಳ ಪಾವತಿ ಸಂಬಂಧ ಆರ್ಥಿಕ ಇಲಾಖೆ ಈ ಕೆಳಕಂಡ ಸೂಚನೆ ನೀಡಿರುತ್ತದೆ.

 ಸರ್ಕಾರಿ ನೌಕರರ ಆದ್ಯ ಗಮನಕ್ಕೆ.... 2021ನೇ ಏಪ್ರಿಲ್ ಪೂರ್ವದಲ್ಲಿ ಬಾಕಿ ಇರುವ ಎಲ್ಲಾ ವಿಧದ ಅರಿರ‍್ಸ್ ಬಿಲ್‌ಗಳನ್ನು ಪಾವತಿಸಲು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಾಕಿ ಬಿಲ್ಲುಗಳ ಪಾವತಿ ಸಂಬAಧ ಆರ್ಥಿಕ ಇಲಾಖೆ ಈ ಕೆಳಕಂಡ ಸೂಚನೆ ನೀಡಿರುತ್ತದೆ.  ತಾಲ್ಲೂಕು/ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಧಿಕಾರಿ ಹಾಗೂ ನೌಕರರು ಕಳೆದ ಸಾಲಿನಲ್ಲಿ ಬಾಕಿ ಇರುವ ಎಲ್ಲಾ ವಿಧದ ಅರಿರ‍್ಸ್ ಪಾವತಿಗೆ ಅಗತ್ಯವಿರುವÀ ಅನುದಾನದ ವಿವರಗಳನ್ನು ಕ್ರೂಡೀಕರಿಸಿದ ಪ್ರಸ್ತಾವನೆಯನ್ನು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮೂಲಕ ವಿಶೇಷಾಧಿಕಾರಿಗಳು, ಮತ್ತು ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ-ಇವರಿಗೆ ಸಲ್ಲಿಸುವುದು. ರಾಜ್ಯ ಲೆಕ್ಕ ಶೀರ್ಷಿಕೆಯಿಂದ ವೇತನ ಪಡೆಯುವ ಅಧಿಕಾರಿ ಹಾಗೂ ನೌಕರರು ಕಳೆದ ಸಾಲಿನಲ್ಲಿ ಬಾಕಿ ಇರುವ ಎಲ್ಲಾ ವಿಧದ ಅರಿರ‍್ಸ್ ಪಾವತಿಗೆ ಅಗತ್ಯವಿರುವÀ ಅನುದಾನದ ವಿವರಗಳನ್ನು ಕ್ರೂಡೀಕರಿಸಿ ಪ್ರಸ್ತಾವನೆಯನ್ನು ಆಯಾ ಆಡಳಿತ ಇಲಾಖೆಗಳ ಮೂಲಕ ಆರ್ಥಿಕ ಇಲಾಖೆಗೆ ಸಲ್ಲಿಸುವುದು.

ಶಿಕ್ಷಣ ಇಲಾಖೆಯ ಶಿಶುಪಾಲನೆ ರಜೆ ಮಂಜೂರಾತಿ ಬಗ್ಗೆ ಸ್ಪಷ್ಟಿಕರಣ ಆದೇಶ.

ಶಿಕ್ಷಣ ಇಲಾಖೆಯ ಶಿಶುಪಾಲನೆ ರಜೆ ಮಂಜೂರಾತಿ ಬಗ್ಗೆ ಸ್ಪಷ್ಟಿಕರಣ ಆದೇಶ.

ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ನಡವಳಿ.

ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ನಡವಳಿ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಹಾಗೂ ಸಮಿತಿ ಸದಸ್ಯರೊಂದಿಗೆ  ದಿನಾಂಕ : 28.10.2021 ರಂದು ಅಪರಾಹ್ನ 12.30 ಗಂಟೆಗೆ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ನಡವಳಿಗಳು.

2021ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-11-2021

 2021ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ:-  ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-11-2021  ಅರ್ಜಿ ಸಲ್ಲಿಸುವ ವಿಧಾನ:- ಇಲಾಖಾ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ (KPSC) ವೆಬ್‍ಸೈಟ್ http://www.kpsc.kar.nic.in ಗೆ ಭೇಟಿ ನೀಡಬೇಕು ಹಾಗೂ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ಅನುಬಂಧ-1 ರಲ್ಲಿನ ಮಾಹಿತಿಯನ್ನು ಓದಿಕೊಳ್ಳುವಂತೆ ತಿಳಿಸಲಾಗಿದೆ.  ಅರ್ಹತೆ:- ಚಿ) ಈ ಕೆಳಕಂಡ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅ) ಸರ್ಕಾರಿ ನೌಕರರು. ಆ) ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ ಮಂಡಳಿ/ ಸ್ಥಳೀಯ ಸಂಸ್ಥೆಗಳು/  ವಿಶ್ವವಿದ್ಯಾಲಯU Àಳು/ ಪ್ರಾಧಿಕಾರಿಗಳ ಖಾಯಂ ನೌಕರರು. b) ಗ್ರೂಪ್-‘ಡಿ’ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. 

ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಆದ್ಯ ಗಮನಕ್ಕೆ.....

    ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಆದ್ಯ ಗಮನಕ್ಕೆ.....           ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ರೊಂದಿಗೆ ಇಂದು ವಿಧಾನ ಸೌಧದ ಸಚಿವರ ಕೊಠಡಿಯಲ್ಲಿ ನಡೆದ ವಿಶೇಷ ಸಭೆಯಲ್ಲಿ ರಾಜ್ಯಾಧ್ಯಕ್ಷರು ಪ್ರಸ್ತಾಪಿಸಿದ ಶಿಕ್ಷಕರುಗಳ / ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.   ಮಾನ್ಯ ಸಚಿವರು ಶಿಕ್ಷಕರುಗಳ/ ಉಪನ್ಯಾಸಕರ ಸಮಸ್ಯೆಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸುವುದಾಗಿ ಸ್ಪಷ್ಠ ಭರವಸೆ ನೀಡಿದರು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಸೆಲ್ವಕುಮಾರ್ ಹಾಗೂ ಮಾನ್ಯ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿಯವರಾದ   ಶ್ರೀ ಎಂ.ಆರ್. ರವಿರವರು ಉಪಸ್ಥಿತರಿದ್ದರು. • ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (1-5ನೇ ತರಗತಿ)  ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂದಿನ ಸೇವಾ ಜೇಷ್ಠತೆಯನ್ನು ಪರಿಗಣಿಸಿ ಪರೀಕ್ಷೇ ನಡೆಸದೇ 6-8ನೇ ತರಗತಿ ಶಾಲೆಗಳಿಗೆ ಮೇಲ್ದರ್ಜೆಗೇರಿಸಲು/ ವೀಲಿನಗೊಳಿಸಲು ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ  75 ಸಾವಿರ ಪದವೀಧರ ಶಿಕ್ಷಕರುಗಳು ಹಲವಾರು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವುದು. • 1998-1999ರಲ್ಲಿ ಸೇವೆಗೆ ಸೇರ್ಪಡೆಗೊಂಡು, ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲ...

ಶಿಕ್ಷಣ ಇಲಾಖೆಯ ಶಿಶುಪಾಲನೆ ರಜೆ ಮಂಜೂರಾತಿ ಬಗ್ಗೆ ಸ್ಪಷ್ಟೀಕರಣ

 ಶಿಕ್ಷಣ ಇಲಾಖೆಯ ಶಿಶುಪಾಲನೆ ರಜೆ ಮಂಜೂರಾತಿ ಬಗ್ಗೆ ಸ್ಪಷ್ಟೀಕರಣ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಶಿಕ್ಷಕಿಯರಿಗೆ ಶಿಶುಪಾಲನೆ ರಜೆ ಮಂಜೂರಾತಿ ಸಂಬAಧ ಶಿಕ್ಷಣ ಇಲಾಖೆಯಿಂದ ಆರ್ಥಿಕ ಇಲಾಖೆಯ ಸ್ಪಷ್ಟೀಕರಣ ಕೋರಲಾಗಿತ್ತು. ಸಂಘದ ಮನವಿಯಂತೆ ಆರ್ಥಿಕ ಇಲಾಖೆಯೂ ಈ ಬಗ್ಗೆ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಶಿಶುಪಾಲನಾ ರಜೆಯನ್ನು ಮಂಜೂರು ಮಾಡುವಂತೆ ಸ್ಪಷ್ಟೀಕರಣ ನೀಡಿದ್ದು, ಇನ್ನೆರಡು ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದ ನಿರ್ದೇಶನ ಹೊರಬೀಳಲಿದೆ.

ದಿನಾಂಕ:8-11-2021ರ0ದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮುಂಬಡ್ತಿಯನ್ನು ಇನ್ನು ಮುಂದೆ ಹುದ್ದೆ ಆಧಾರಿತ (Post Based) ಹುದ್ದೆಗಳನ್ನಾಗಿ ವರ್ಗೀಕರಿಸಿ ಮುಂಬಡ್ತಿ ನೀಡಲು ತೀರ್ಮಾನ ಮಾಡಿರುವ ಬಗ್ಗೆ

ದಿನಾಂಕ:8-11-2021ರ0ದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮುಂಬಡ್ತಿಯನ್ನು ಇನ್ನು ಮುಂದೆ ಹುದ್ದೆ ಆಧಾರಿತ (Post Based) ಹುದ್ದೆಗಳನ್ನಾಗಿ ವರ್ಗೀಕರಿಸಿ ಮುಂಬಡ್ತಿ ನೀಡಲು ತೀರ್ಮಾನ ಮಾಡಿರುವ ಬಗ್ಗೆ. ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಲಭ್ಯವಾಗುವ ಹುದ್ದೆಗಳನ್ನು ರಿಕ್ತಸ್ಥಾನ ಆಧಾರಿತ ಹುದ್ದೆಗಳೆಂದು ಪರಿಗಣಿಸಿ ಪದೋನ್ನತಿ ನೀಡಲಾಗುತ್ತಿತ್ತು. • ಇದರಿಂದಾಗಿ ರಾಜ್ಯ ಸರ್ಕಾರ ನೌಕರರಿಗೆ ಮುಂಬಡ್ತಿ ಅವಕಾಶಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುತ್ತಿರಲಿಲ್ಲ. ಈ ಸಂಬAಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮನವಿ ಸಲ್ಲಿಸಿ ರಾಜ್ಯದ ಸರ್ಕಾರಿ ನೌಕರರಿಗೆ ಮುಂಬಡ್ತಿಗಳನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿ ಹಾಗೂ ರಾಜ್ಯದ ಕೆ.ಎ.ಎಸ್. ಅಧಿಕಾರಿಗಳಿಗೆ ನೀಡುತ್ತಿರುವ ಹುದ್ದೆ ಆಧಾರಿತ (Posಣ bಚಿseಜ) ಮಾದರಿಯಲ್ಲಿ ಪದೋನ್ನತಿಗೆ ಅವಕಾಶ ಕಲ್ಪಿಸಿಸುವಂತೆ ಸರ್ಕಾರಕ್ಕೆ ವಿನಂತಿಸಲಾಗಿತ್ತು. • ಆದರAತೆ ಸರ್ಕಾರವು ದಿ:08-11-2021 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆ.ಎ.ಎಸ್. ಅಧಿಕಾರಿಗಳಿಗೆ ನೀಡುವ ಮುಂಬಡ್ತಿಯ ಮಾದರಿಯಲ್ಲಿ ರಿಕ್ತ ಸ್ಥಾನ ಹುದ್ದೆಗಳಿಗೆ ಬದಲಾಗಿ ಹುದ್ದೆ ಆಧಾರಿತ (Posಣ bಚಿseಜ) ಹುದ್ದೆಗಳನ್ನಾಗಿ ವರ್ಗೀಕರಿಸಿ ಎಲ್ಲಾ ಇಲಾಖೆಯ ನೌಕರರಿಗೆ ಮು...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ: 07-11-2021ರಂದು ನಡೆದ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ: 07-11-2021ರಂದು ನಡೆದ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳು.           ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (1-5ನೇ ತರಗತಿ)  ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂದಿನ ಸೇವಾ ಜೇಷ್ಠತೆಯನ್ನು ಪರಿಗಣಿಸಿ 6-8ನೇ ತರಗತಿ ಶಾಲೆಗಳಿಗೆ ಮೇಲ್ದರ್ಜೆಗೇರಿಸಲು/ವೀಲಿನಗೊಳಿಸಲು ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ  75 ಸಾವಿರ ಪದವೀಧರ ಶಿಕ್ಷಕರುಗಳು ಹಲವಾರು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವುದು.                1998-1999ರಲ್ಲಿ ಸೇವೆಗೆ ಸೇರ್ಪಡೆಗೊಂಡು, ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯಲದ ಆದೇಶದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಂಡ ಸುಮಾರು 4000 ಪ್ರಾಥಮಿಕ/ಪ್ರೌಡಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಾತಿ ಹೊಂದಿದ್ದು, ಮರುನೇಮಕಾತಿ ಹೊಂದುವ ಪೂರ್ವದಲ್ಲಿ ಸಲ್ಲಿಸಿರುವ 4-5 ವರ್ಷಗಳ ಸೇವೆಯನ್ನು ಪರಿಗಣಿಸಿ  ಕಾಲ್ಪನಿಕವಾಗಿ ವೇತನ ನಿಗದಿಗೊಳಿಸುವುದು.    ...

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers