Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಏಪ್ರಿಲ್ 21 ರಂದು‌" ರಾಜ್ಯ ಸರ್ಕಾರಿ‌ ನೌಕರರ ದಿನಾಚರಣೆ" ಸರ್ಕಾರದಿಂದ ಆದೇಶ.- ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,

ಸರ್ಕಾರ ಪ್ರತಿ ವರ್ಷ ಏಪ್ರಿಲ್ 21 ರಂದು ನಾಗರೀಕ ಸೇವಾ ದಿನ " ವನ್ನು " ರಾಜ್ಯ ಸರ್ಕಾರಿ ನೌಕರರ ದಿನಾಚರಣೆ " ಯನ್ನಾಗಿ ಆಚರಿಸಲು ಹಾಗೂ ಈಗಾಗಲೇ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಪ್ರತಿ ವರ್ಷ “ ಗಣರಾಜ್ಯೋತ್ಸವ ದಿನ " ದಂದು ನೀಡುತ್ತಿರುವ , " ಸರ್ವೋತ್ತಮ ಸೇವಾ ಪ್ರಶಸ್ತಿ ” ಯನ್ನು ಏಪ್ರಿಲ್ 21 ರ " ರಾಜ್ಯ ಸರ್ಕಾರಿ ನೌಕರರ ದಿನಾಚರಣೆ " ಯಂದು ನಿಗಧಿತ ಶಿಷ್ಟಾಚಾರವನ್ನು ಅನುಸರಿಸಿ ಪ್ರದಾನ ಮಾಡಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ . 



ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರತೀ ವರ್ಷ “ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ” ಆಚರಿಸಲು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾತ್ವಾಕಾಂಕ್ಷೆಯ ಬೇಡಿಕೆಯಾದ ಪ್ರತೀ ವರ್ಷ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸುವ ಬೇಡಿಕೆಗೆ ಮಾನ್ಯ ಮುಖ್ಯಮಂತ್ರಿಗಳು ಸ್ಪಂದಿಸಿ , ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಸಹ ಪ್ರತೀ ವರ್ಷ ಏಪ್ರಿಲ್ -21 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಹಂತದಲ್ಲಿ ಆಚರಿಸಲು ಇಂದು ಆದೇಶ ಹೊರಡಿಸಿದೆ . ದಿನಾಚರಣೆ ದಿನದಂದು ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರಿಗೆ ' ಸರ್ವೋತ್ತಮ ಸೇವಾ ಪ್ರಶಸ್ತಿ ' ಗಳನ್ನು ರಾಜ್ಯ ಹಾಗೂ ಜಿಲ್ಲಾ ಹಂತಗಳಲ್ಲಿ ನೀಡಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿ ಆದೇಶ ಹೊರಡಿಸಿರುತ್ತಾರೆ . 

 ರಾಜ್ಯದ ಸಮಸ್ತ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಬಹಳ ವರ್ಷದ ಬೇಡಿಕೆಗೆ ಸ್ಪಂದಿಸಿ ಆದೇಶ ಹೊರಡಿಸಿರುವ ಸನ್ಮಾನ್ಯ ಮುಖ್ಯಮಂತ್ರಿಗಳು , ಸಚಿವ ಸಂಪುಟದ ಎಲ್ಲಾ ಸಚಿವರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತದೆ . ವಂದನೆಗಳೊಂದಿಗೆ , ತಮ್ಮ ವಿಶ್ವಾಸಿ , ( ಸಿ.ಎಸ್.ಷಡಾಕ್ಷರಿ ) ರಾಜ್ಯಾಧ್ಯಕ್ಷರು

ಪೂರ್ಣ ‌ಆದೇಶ ಪ್ರತಿ ::-

ರಾಜ್ಯ ಸರ್ಕಾರದ ವತಿಯಿಂದ " ನಾಗರಿಕ ಸೇವಾ ದಿನ " ವನ್ನು " ರಾಜ್ಯ ಸರ್ಕಾರಿ ನೌಕರರ ದಿನ " ವನ್ನಾಗಿ ಆಚರಿಸುವ ಬಗ್ಗೆ . 


 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮನವಿಯನ್ನು ಸಲ್ಲಿಸಿ , ಕರ್ನಾಟಕ ಸರ್ಕಾರವು ರಾಜ್ಯದ ನಾಡು , ನುಡಿ , ನೆಲ , ಜಲ , ಸಂಸ್ಕೃತಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ನೀಡುವ ಕೊಡುಗೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ , ಗಣ್ಯರ ನೆನಪಿಗಾಗಿ ದಿನಾಚರಣೆ ಹಾಗೂ ಜಯಂತಿಗಳನ್ನು ಆಚರಿಸುತ್ತಾ ಬಂದಿದೆ . ಅದೇ ರೀತಿ ಕಾರ್ಯಾಂಗದ ಆಧಾರ ಸ್ತಂಭವಾಗಿರುವ ರಾಜ್ಯ ಸರ್ಕಾರಿ ನೌಕರರನ್ನು ಪ್ರೋತ್ಸಾಹಿಸುವ ಹಾಗೂ ಕರ್ತವ್ಯದಲ್ಲಿ ಒತ್ತಡ ನಿವಾರಿಸಿ , ಕ್ರಿಯಾಶೀಲತೆ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಆಚರಿಸುತ್ತಿರುವ ಕೇಂದ್ರ ಸರ್ಕಾರಿ ನೌಕರರ ದಿನಾಚರಣೆ ಯಂತೆಯೇ ರಾಜ್ಯದಲ್ಲೂ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಪ್ರತಿ ವರ್ಷ ನಿಗಧಿತ ದಿನಾಂಕದಂದು ಆಚರಿಸುವಂತೆ ಮತ್ತು ಆ ದಿನದಂದು ಅಪ್ರತಿಮ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವ ದಿನ " ದಂದು ನೀಡುತ್ತಿರುವ " ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಂದು ಪ್ರಧಾನ ಮಾಡುವಂತೆ ಮನವಿ ಸಲ್ಲಿಸಿರುತ್ತಾರೆ . ಕೇಂದ್ರ ಸರ್ಕಾರವು ಭಾರತೀಯ ಆಡಳಿತ ಸೇವೆಗೆ ಸೇರಿದವರನ್ನು ಅಂದಿನ ಕೇಂದ್ರದ ಪ್ರಥಮ ಗೃಹ ಸಚಿವರಾದ ಸರ್ದಾರ್ ವಲ್ಲಭ ಭಾಯ್ ಪಾಟೀಲ್ ರವರು 1947 ರ ಏಪ್ರಿಲ್ 21 ರಂದು ಆಡಳಿತ ಸೇವೆಗೆ ಸೇರಿದ ಪ್ರೊಬೆಷನರ್ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ದಿನವನ್ನು ಕೇಂದ್ರ ಸರ್ಕಾರವು “ ಸಿವಿಲ್ ಸರ್ವೀಸ್ ಡೇ ಯನ್ನಾಗಿ ಆಚರಣೆ ಮಾಡಲಾಗುತ್ತಿದೆ . ಈ ಬಗ್ಗೆ ಪರಿಶೀಲಿಸಲಾಗಿ , ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯು ರಾಜ್ಯ ಸರ್ಕಾರದ ಕಾರ್ಯಾಂಗದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳೂ ಸೇರಿದಂತೆ ರಾಜ್ಯ ಮಟ್ಟದ / ಜಿಲ್ಲಾ ಮಟ್ಟದ / ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿ / ನೌಕರರನ್ನು ಒಳಗೊಂಡು ದಿನಾಚರಣೆಯನ್ನು ಆಚರಿಸಲು ಉದ್ದೇಶಿಸಲಾಗಿದೆ . ಆದ್ದರಿಂದ ಕೇಂದ್ರ ಸರ್ಕಾರದ ಮಾದರಿಯನ್ನಯ ರಾಜ್ಯದಲ್ಲಿ " ನಾಗರಿಕ ಸೇವಾ ದಿನ " ವನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ” ಯನ್ನಾಗಿ ಪ್ರತಿ ವರ್ಷ ಏಪ್ರಿಲ್ 21 ರಂದು ನಿಗಧಿ ಪಡಿಸಿ ವಿವಿಧ ಕಾರ್ಯಕ್ರಮಗಳ ಮೂಲಕ ದಿನಾಚರಣೆಯನ್ನು ಆಚರಿಸಿ , ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಈಗಾಗಲೇ ಪ್ರತಿ ವರ್ಷ ವಿವಿಧ ಹಂತಗಳಲ್ಲಿ ಜನವರಿ 26 ಗಣರಾಜ್ಯೋತ್ಸವ ದಿನ " ದಂದು ನೀಡುತ್ತಿರುವ “ ಸರ್ವೋತ್ತಮ ಸೇವಾ ಪ್ರಶಸ್ತಿ " ಯನ್ನು " ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಂದು ನೀಡುವುದರ ಮೂಲಕ ಅವಿಸ್ಮರಣೀಯ ಗೊಳಿಸಲು ತೀರ್ಮಾನಿಸಿದೆ .ಮೇಲಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ , ಸನ್ಮಾನ್ಯ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ರೀತಿಯಲ್ಲಿ ರಾಜ್ಯದಲ್ಲೂ ಸಹ ಪ್ರತಿ ವರ್ಷ ಏಪ್ರಿಲ್ 21 ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಹಂತದಲ್ಲಿ ಆಚರಿಸಲು ಒಪ್ಪಿರುತ್ತಾರೆ ಹಾಗೂ ಅಂದಿನ ದಿನ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರಿಗೆ ಪ್ರಧಾನ ಮಾಡುವ “ ಸರ್ವೋತ್ತಮ ಸೇವಾ ಪ್ರಶಸ್ತಿ ' ಯನ್ನು ವಿವಿಧ ಹಂತಗಳಲ್ಲಿ ನೀಡುವ ಮೂಲಕ ಪ್ರೋತ್ಸಾಹಿಸುವಂತೆ ಸೂಚಿಸಿರುತ್ತಾರೆ . ಮೇಲಿನ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಆದೇಶಿಸಿದೆ . ಸರ್ಕಾರದ ಆದೇಶದ ಸಂಖ್ಯೆ : ಸಿಆಸುಇಅಸು 33 ಈಕಾಅ 2020 , ಬೆಂಗಳೂರು , ದಿನಾಂಕ : 18.01.2021 .  


ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಸರ್ಕಾರ ಪ್ರತಿ ವರ್ಷ ಏಪ್ರಿಲ್ 21 ರಂದು ನಾಗರೀಕ ಸೇವಾ ದಿನ " ವನ್ನು " ರಾಜ್ಯ ಸರ್ಕಾರಿ ನೌಕರರ ದಿನಾಚರಣೆ " ಯನ್ನಾಗಿ ಆಚರಿಸಲು ಹಾಗೂ ಈಗಾಗಲೇ ಅತ್ಯುತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಪ್ರತಿ ವರ್ಷ “ ಗಣರಾಜ್ಯೋತ್ಸವ ದಿನ " ದಂದು ನೀಡುತ್ತಿರುವ , " ಸರ್ವೋತ್ತಮ ಸೇವಾ ಪ್ರಶಸ್ತಿ ” ಯನ್ನು ಏಪ್ರಿಲ್ 21 ರ " ರಾಜ್ಯ ಸರ್ಕಾರಿ ನೌಕರರ ದಿನಾಚರಣೆ " ಯಂದು ನಿಗಧಿತ ಶಿಷ್ಟಾಚಾರವನ್ನು ಅನುಸರಿಸಿ ಪ್ರದಾನ ಮಾಡಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ . ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ( ಆಡಳಿತ ಸುಧಾರಣೆ ಮತ್ತು ಕಾರ್ಯಾಧ್ಯಯನ )  


ಕಾರ್ಯಾಂಗದ ಆಧಾರ ಸ್ತಂಭವಾಗಿರುವ ರಾಜ್ಯ ಸರ್ಕಾರಿ ನೌಕರರನ್ನು ಪ್ರೋತ್ಸಾಹಿಸುವ ಹಾಗೂ ಕರ್ತವ್ಯದಲ್ಲಿ ಒತ್ತಡ ನಿವಾರಿಸಿ , ಕ್ರಿಯಾಶೀಲತೆ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಿದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳು , ಸಚಿವ ಸಂಪುಟದ ಎಲ್ಲಾ ಸಚಿವರು ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಮಸ್ತ ರಾಜ್ಯ ಸರ್ಕಾರಿ ನೌಕರರ ಪರವಾಗಿ ಸಂಘವು ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತದೆ .- ಸಿ.ಎಸ್.ಷಡಾಕ್ಷರಿ, ಅಧ್ಯಕ್ಷರು.


Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers