Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ಸಭೆ-ಸಿ.ಎಸ್.ಷಡಾಕ್ಷರಿ

ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ  ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.



 

1.            ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ವರ್ಗಕ್ಕೆ ಹಳೇಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಕಾಲಿಕವಾಗಿ ತಿದ್ದುಪಡಿ ತರುವುದು.

) ಗ್ರೂಪ್ಸಿಹುದ್ದೆಯಲ್ಲಿ ಬಡ್ತಿ ನೀಡಲು ಕನಿಷ್ಠ ನಿಲುಗಡೆ ಕಡಿಮೆ ಮಾಡುವುದು.( ಉದಾ: 5-2  

   ವರ್ಷಗಳ ನಿಲುಗಡೆ ನೀಡುವುದು)

    ಬಿ) ಗ್ರೂಪ್ಬಿವೃಂದದ ಲಿಪಿಕ ನೌಕರರಿಗೆ ಬಡ್ತಿ ನೀಡಲು ಕನಿಷ್ಠ ನಿಲುಗಡೆ ಅವಧಿಯನ್ನು ಐದು

       ವರ್ಷದಿಂದ ಒಂದು  ವರ್ಷಕ್ಕೆ ಇಳಿಸುವುದು.

2.            ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ವೃಂದದ ಎಲ್ಲಾ ವರ್ಗಗಳಿಗೆ ಮುಂಬಡ್ತಿ ಅನುಪಾತವನ್ನು ಹಾಲಿ ಇರುವ  ಶೇ. 50 ಅನುಪಾತವನ್ನು ಶೇ. 75ಕ್ಕೆ ಹೆಚ್ಚಳ ಮಾಡಿ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರುವುದು.

3.            ಹಿಂದೆ ಹಲವಾರು ವರ್ಷಗಳಿಂದ ಮುಂಬಡ್ತಿ ನೀಡಲು ವಿಳಂಭವಾಗಿರುವುದರಿಂದ ಪ್ರತೀ ವರ್ಷ ಕನಿಷ್ಠ ಎರಡು ಬಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ವೃಂದಗಳ ಹುದ್ದೆಗಳನ್ನು ಬಡ್ತಿ ಮೂಲಕ ಭರ್ತಿಮಾಡುವುದು.

4.            ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಒಂದು ಸಹಾಯಕ ನಿರ್ದೇಶಕರ ಹುದ್ದೆ ಇದ್ದು, ಹುದ್ದೆಯ ಕಾರ್ಯ ನಿರ್ವಹಣೆಯು ಬೋಧಕ ಕಾರ್ಯವಾಗಿರುವುದಿಲ್ಲ. ಬದಲಾಗಿ ಪೂರ್ಣ ಪ್ರಮಾಣದಲ್ಲಿ ಬೋಧಕೇತರ ವೃಂದದ ಕಾರ್ಯ ನಿರ್ವಹಣೆಯಾಗಿರುತ್ತದೆ. ಹಿನ್ನೆಲೆಯಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಬೋಧಕೇತರ ವೃಂದಕ್ಕೆ ಮೀಸಲಿರಿಸಿದಲ್ಲಿಬೋಧಕ ವೃಂದದ ಅಧಿಕಾರಿಗಳನ್ನು ಶೈಕ್ಷಣಿಕ ಪ್ರಗತಿ ಕಾರ್ಯದಲ್ಲಿ ತೊಡಗಿಸಿ ಕೊಳ್ಳಬಹುದಾಗಿದೆ. ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಮಂಜೂರಾದ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಲಿಪಿಕ ವೃಂದಕ್ಕೆ ಸೇರ್ಪಡೆಗೊಳಿಸುವುದು. ಇದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯುಂಟಾಗುವುದಿಲ್ಲ.

 

5.            ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ತಾಂತ್ರಿಕ ಸಹಾಯಕರ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಪ್ರಥಮ ದರ್ಜೆಯ ಸಹಾಯಕರು/ ದ್ವಿ.. ಹುದ್ದೆಯ ಕರ್ಯಾನಿರ್ವಹಣೆ ಮಾಡುತ್ತಿದ್ದು, ಹುದ್ದೆಗಳನ್ನು ಲಿಪಿಕ ವೃಂದದ ಹುದ್ದೆಗಳನ್ನಾಗಿ ಪರಿವರ್ತಿಸುವುದು. ಇಲಾಖೆಯಲ್ಲಿ ತಾಂತ್ರಿಕ ಪರಿಣಿತ ಹೊಂದಿರುವ (ಬಿ. ಪದವಿ) ಹೊಂದಿರುವ ಸಾಕಷ್ಟು ನೌಕರರು ನೇಮಕ ಹೊಂದಿದ್ದು, ವೇತನ ಶ್ರೇಣಿಯು ಅಧೀಕ್ಷಕರ ಹುದ್ದೆಗೆ ಸಮಾನಾಂತರವಾಗಿರುವುದರಿಂದ ಅಧೀಕ್ಷಕರ ಹುದ್ದೆಗೆ ಪರಿವರ್ತಿಸಿ, ಜಿಲ್ಲಾ ಪಂಚಾಯತ್ನಲ್ಲಿ ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸುವ ಮೂಲಕ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಹಕಾರಿಯಾಗುತ್ತದೆ.

 6.            ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಾಲಿ ಇರುವ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಯನ್ನು  ದ್ವಿತೀಯ ದರ್ಜೆ ಸಹಾಯಕಎಂದು ಪದನಾಮೀಕರಿಸಲು ಆಯುಕ್ತರು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುತ್ತಾರೆ.  ಜೇಷ್ಠತಾ ಪಟ್ಟಿಯಲ್ಲಿ ವಿಲೀನಗೊಳಿಸಿ, ಕಾಲಿಕವಾಗಿ ಮುಂಬಡ್ತಿ ನೀಡಲು ಕ್ರಮವಹಿಸಿವುದು. ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿ ಇದ್ದ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳನ್ನು ದ್ವಿ..ಸಹಾಯಕ ಹುದ್ದೆಯಲ್ಲಿ ವಿಲೀನಗೊಳಿಸಿ ಬಡ್ತಿ ನೀಡಿರುತ್ತಾರೆ. 

7.            ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕ ಹುದ್ದೆಯನ್ನುಸಹಾಯಕ ನಿರ್ದೇಶಕರು(ಆಡಳಿತ)’ ಎಂದು ಪದನಾಮೀಕರಿಸುವುದು.

8.            ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು(ಆಡಳಿತ) ಕಛೇರಿಯಲ್ಲಿನ ಪತ್ರಾಂಕಿತ ಸಹಾಯಕ ಹುದ್ದೆಯನ್ನು ಹಿರಿಯಸಹಾಯಕ ನಿರ್ದೇಶಕರು (ಆಡಳಿತ)’ ಎಂದು ಪದನಾಮೀಕರಿಸುವುದು.

 9.            ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ ಹೊಸ ಶೈಕ್ಷಣಿಕ ಜಿಲ್ಲೆಗಳಲ್ಲಿನ ಜಿಲ್ಲಾ ಉಪ ನಿರ್ದೇಶಕರು(ಆಡಳಿತ) ಕಛೇರಿಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕ ಹುದ್ದೆಯನ್ನು ಪತ್ರಾಂಕಿತ ಸಹಾಯಕ ಹುದ್ದೆಗೆ ಮೇಲ್ದರ್ಜೆಗೇರಿಸಲು ಸರ್ಕಾರವು ಈಗಾಗಲೇ ಅನುಮೋದಿಸಿದ್ದು, ಸದರಿ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿರುತ್ತದೆ. ಕೂಡಲೇ ಜಾರಿಗೊಳಿಸುವುದು. (ಕಡತ ಸಂಖ್ಯೆ:ಇಪಿ90/ಡಿಎಆರ್/2020 ಮತ್ತು ಎಫ್.ಡಿ.443/ಇಎಕ್ಸ್ಪಿ.8/2020 ಮತ್ತು ಇಡಿ 45.ಡಿಎಆರ್.2019)

 10.        ಹೊಸದಾಗಿ ಮಂಜೂರಾಗಿರುವ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳನ್ನು ಆರಂಭಿಸಿ, ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸುವುದು.

 11.         ಪ್ರಸ್ತುತ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿನ 117 ಲೆಕ್ಕಾಧಿಕ್ಷಕರ ಹುದ್ದೆಗಳ ಪೈಕಿ ಪ್ರತಿ ಜಿಲ್ಲೆಗೆ ಒಂದರಂತೆ 34 ಹುದ್ದೆಗಳು ಹಾಗೂ ಕರ್ನಾಟಕ ಪಠ್ಯಪುಸ್ತಕ ಸಂಘದ ಕಛೇರಿಗೆ 01 ಹುದ್ದೆ ಸೇರಿ ಒಟ್ಟು 35 ಲೆಕ್ಕಾಧಿಕ್ಷಕರ ಹುದ್ದೆಗಳನ್ನು ಲೆಕ್ಕಪರಿಶೋಧನಾಧಿಕಾರಿಗಳ ಹುದ್ದೆಗೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದರಿ ಪ್ರಸ್ತಾವನೆಯು ಆರ್ಥಿಕ ಇಲಾಖೆಯ ಪರಿಶೀಲನೆಯಲ್ಲಿರುತ್ತದೆ. ಸದರಿ ಹುದ್ದೆಗಳನ್ನು ಮೇಲ್ದರ್ಜೆಗೆರಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಲೆಕ್ಕಾದೀಕ್ಷಕ ವೃಂದದಿಂದ ಬಡ್ತಿ ನೀಡುವುದು.

ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಹಾಗೂ ಕೇಂದ್ರ ಸಂಘದ ಪಧಾಧಿಕಾರಿಗಳು ಮತ್ತು ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳೂ ಭಾಗವಹಿಸಿ ಮೇಲ್ಕಂಡ ಬೇಡಿಕೆಗಳ ಬಗ್ಗೆ ಮಾನ್ಯ ಸಚಿವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers