Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಪ್ರಾಥಮಿಕ ಶಾಲಾ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಭೆ-ಸಿ.ಎಸ್.ಷಡಾಕ್ಷರಿ

ಪ್ರಾಥಮಿಕ ಶಾಲಾ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಇಂದು ನಡೆದ ಸಭೆಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಗಮನಕ್ಕೆ ತಂದು ಇಲಾಖಾ ಹಂತದಲ್ಲಿ ಇತ್ಯರ್ಥಪಡಿಸುವಂತೆ ಮನವಿ ಮಾಡಿದರು.


 

 

1.            300ಕ್ಕೂ ಹೆಚ್ಚು ಮಕ್ಕಳಿರುವ ಮಾದರಿ ಪ್ರಾಥಮಿಕ ಶಾಲೆಗಳಿಗೆ ಗ್ರೂಪ್ಡಿನೌಕರರನ್ನು ನೇಮಕಗೊಳಿಸುವುದು.

 2.            ಮುಖ್ಯ ಶಿಕ್ಷಕರಿಗೆ 30 ದಿನಗಳ ಗಳಿಕೆ ರಜೆ ಮಂಜೂರು ಮಾಡುವುದು.

 3.            ಸಿ.ಆರ್.ಪಿ. ಹುದ್ದೆಗಳನ್ನು ಮೂರು ವರ್ಷಕ್ಕೊಮ್ಮೆ ಪುನರ್ ನಿಯೋಜಿಸುವುದು.

 4.            ಒಮ್ಮೆ ಸಿ.ಆರ್.ಪಿ. ಆಗಿ ಸೇವೆ ಸಲ್ಲಿಸಿದವರು ಮತ್ತೊಮ್ಮೆ ಅವಕಾಶ ನೀಡಬಾರದು.

 5.            ಸಿ.ಆರ್.ಪಿ/ಬಿ.ಆರ್.ಪಿ. ಹುದ್ದೆಗಳ ಕಾರ್ಯಭಾರವನ್ನು ಡಯಟ್ ವ್ಯಾಪ್ತಿಗೆ ತರುವುದು.

 6.            ಹಿರಿಯ ಪ್ರಾಥಮಿಕ ಶಾಲೆಗಳ ಟಿ.ಜಿ.ಟಿ. ಶಿಕ್ಷಕರನ್ನು ಪ್ರೌಢ ಶಾಲೆಗಳಿಗೆ ವರ್ಗಾಯಿಸುವುದು.

 7.            ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಪಡೆದ ಶಿಕ್ಷಕರಿಗೆ ಸೇವಾ ಜೇಷ್ಠತೆಯನ್ನು ಪರಿಗಣಿಸಿ 10,15,20,25, ಮತ್ತು 30 ವರ್ಷಗಳ ಕಾಲಮಿತಿ ಬಡ್ತಿ ಮಂಜೂರು ಮಾಡುವುದು.

 8.            ವರ್ಷಕ್ಕೆರಡು ಬಾರಿ ಬಡ್ತಿ ಪ್ರಕ್ರಿಯೆಯನ್ನು ತಪ್ಪದೇ ನಡೆಸುವುದು.

 9.            ಎಸ್.ಎಸ್.. ಶಿಕ್ಷಕರ ಅನುದಾನವನ್ನು ಸಾಮಾನ್ಯ ಶಿಕ್ಷಕರ ರೀತಿಯಲ್ಲಿ ಮರು ಸಂಯೋಜಿಸುವುದು.

10.         ಪದವಿ ಪಡೆದ ಶಿಕ್ಷಕರನ್ನು ಪೂರ್ವ ಪರೀಕ್ಷೆಗೊಳಪಡಿಸಿದೆ, ಮಾಧ್ಯಮಿಕ ಶಾಲೆಗೆ (6-8ನೇ ತರಗತಿಸೇವಾ ವಿಲೀನಗೊಳಿಸುವುದು.          

 11.         ಶಿಕ್ಷಕರನ್ನು ಮತದಾರರ ಬಿ.ಎಲ್.. ಕಾರ್ಯದಿಂದ ವಿಮುಕ್ತಗೊಳಿಸಿ ಶಾಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅನುಮಾಡಿಕೊಡುವುದು.

 12.         ಶಾಲಾ ರಜಾ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆ ಸೌಲಭ್ಯವನ್ನು ಕಲ್ಪಿಸುವುದು.

 13.         ಕಳೆದ ಸಾಲಿನ ಹೆಚ್ಚುವರಿ/ಕಡ್ಡಾಯ ವರ್ಗಾವಣೆಯಿಂದ ಭಾದಿತ ಶಿಕ್ಷಕರಿಗೆ ಬಾರಿ ಕೌನ್ಸಿಲಿಂಗ್ನಲ್ಲಿ ಪ್ರಥಮ ಆದ್ಯತೆ ನೀಡುವುದು.

 14.         ಪ್ರಾಥಮಿಕ ಶಾಲೆಗಳ ಹಿಂದಿ ಶಿಕ್ಷಕರ ಖಾಲಿ ಹುದ್ದೆಗಳನ್ನು ಹಿಂದಿ ಶಿಕ್ಷಕರಿಗೇ ಕಾಯ್ದಿರಿಸಿ, ವರ್ಗಾವಣೆ ಕೌನ್ಸಿಲಿಂಗ್ನಲ್ಲಿ ವರ್ಗಾವಣೆಗೆ ಅವಕಾಶ ಕಲ್ಪಿಸುವುದು.

 15.         ಗ್ರಾಮೀಣ ಕೃಪಾಂಕ ನೌಕರರ ಬೇಡಿಕೆಯನ್ನು ನ್ಯಾಯಯುತವಾಗಿ ಪರಿಗಣಿಸುವುದು.

 16.         ಸರ್ಕಾರದ ಆದೇಶದಂತೆ 60 ಮಕ್ಕಳಿರುವ  ರಾಜ್ಯದ ಎಲ್ಲಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಹಿರಿಯ ಪ್ರಾಥಮಿಕ ಶಾಲೆಗೆ ಉನ್ನತೀಕರಿಸಿ ಮುಖ್ಯ ಶಿಕ್ಷರನ್ನು ನೇಮಕಗೊಳಿಸುವುದು.

 17.         ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 60 ಮಕ್ಕಳಿಗೆ ಒಬ್ಬ ಮುಖ್ಯ ಶಿಕ್ಷಕರಿದ್ದು, ಪದವಿಧರೇತರ ಮುಖ್ಯ ಶಿಕ್ಷಕರಿಗೆ 120 ಮಕ್ಕಳಿಗೆ ನಿಗದಿಪಡಿಸುವುದು.

 18.         ಹಿರಿಯ ಮುಖ್ಯ ಶಿಕ್ಷಕರಿಗೆ ಜೇಷ್ಠತೆಯ ಆಧಾರದ ಮೇಲೆ ಶಿಕ್ಷಣ ಸಂಯೋಜಕರ ಹುದ್ದೆಗೆ ಪರಿಗಣಿಸುವುದು.

 19.         ಇತರೆ ವಿಷಯಗಳು:-

  •  ಪ್ರಾಥಮಿಕ ಶಾಲಾ ಶಿಕ್ಷಕರ ದಿನಾಚರಣೆಗೆ ತಾಲ್ಲೂಕು/ ಜಿಲ್ಲಾ ಹಂತಕ್ಕೆ ಹಾಲಿ ಇರುವ ಸಹಾಯ ಧನವನ್ನು ಹೆಚ್ಚಿಸುವುದು.
  •  ವಲಯ/ ತಾಲ್ಲೂಕು / ಜಿಲ್ಲಾ ಮಟ್ಟದ ಕ್ರೀಡಾಕೂಟದ ಅನುದಾನವನ್ನು ಹೆಚ್ಚಿಸುವುದು.
  •  ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಗುರುಭವನ ನಿರ್ಮಾಣ ಹಾಗೂ ನವೀಕರಣ ಆಗಬೇಕಿದೆ.
  •  ಟಿ.ಬಿ.ಎಫ್ನಿಂದ ನೀಡುವ ಪ್ರೋತ್ಸಾಹ ಧನವನ್ನು ರೂ.5000/-ಕ್ಕೆ ಹೆಚ್ಚಿಸುವುದು.
  •   ಶಿಕ್ಷಕರು / ನೌಕರರುಗಳು ಮೃತರಾದ ಸಂದರ್ಭದಲ್ಲಿ ನೀಡುವ ಅಂತ್ಯ ಸಂಸ್ಕಾರ ಸಹಾಯಧನವನ್ನು ಮೃತರ ಅಂತ್ಯಕ್ರಿಯೆಯ ದಿನದಂದೇ ಮೃತರ ಕುಟುಂಬಕ್ಕೆ ಇಲಾಖೆಯ ಅಧಿಕಾರಿಗಳಿಂದಲೇ ನೀಡಲು ಆದೇಶ ನೀಡುವುದು.
                       
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿರವರು ಹಾಗೂ ಕೇಂದ್ರ ಸಂಘದ ಪಧಾಧಿಕಾರಿಗಳು ಮತ್ತು ವೃಂದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳೂ ಭಾಗವಹಿಸಿ ಮೇಲ್ಕಂಡ ಬೇಡಿಕೆಗಳ ಬಗ್ಗೆ ಮಾನ್ಯ ಸಚಿವರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers