Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮಗಳು-2021

ಕರ್ನಾಟಕ ರಾಜ್ಯ ನಾಗರಿಕ ಸೇವಾ ( ನಡತೆ ) ನಿಯಮಗಳು , 2021 KARNATAKA STATE CIVIL SERVICE ( CONDUCT ) RULES , 2021

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಸೂಚನೆ ಸಂಖ್ಯೆ : ಸಿಆಸುಇ 12 ಸೇನಿಸಿ 2019 , ಬೆಂಗಳೂರು , ದಿನಾಂಕ : 07.01.2021 ರಂದು 
ಕರ್ನಾಟಕ ರಾಜ್ಯ ನಾಗರಿಕ ಸೇವಾ ( ನಡತೆ ) ನಿಯಮಗಳು , 2021ಗಳನ್ನು ಆದೇಶಿದೆ.

ಪೂರ್ಣ ಆದೇಶ ಪ್ರತಿ ಗಾಗಿ ಇಲ್ಲಿ ಕ್ಲಿಕ್ ಮಾಡಿ ಪಿಡಿಎಫ್ ಫೈಲ್ ಪಡೆಯಿರಿ 

ಈ ಹಿಂದೆ ಕರಡು ನಿಯಮಗಳಲ್ಲಿ ಪ್ರಸ್ತಾಪಿಸಲಾಗಿರುವ ಅಂಶಗಳು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರ ವ್ಯಾಪಾರ, ವ್ಯವಹಾರಗಳಿಗಳಿಗೂ ಪ್ರತಿಕೂಲ ಪರಿಣಾಮ ಬೀರುವಂತಿದ್ದು, ಈ  ಕರಡು ನಿಯಮಗಳನ್ನು ಜಾರಿಗೆ ತಂದಲ್ಲಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಅಭಿವ್ಯಕ್ತಿ ಸ್ವಾತಂತ್ರವನ್ನು ಹರಣ ಮಾಡಿದಂತಾಗಲಿದೆ ಅಲ್ಲದೆ  ಭಾರತದ ಸಂವಿಧಾನದಲ್ಲಿ ಈ ದೇಶದ ನಾಗರೀಕರಿಗೆ ನೀಡಿರುವಂತಹ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವಂತಿರುವ ಈ ನಿಯಮಗಳ ಬಗ್ಗೆ ರಾಜ್ಯಾದ್ಯಂತ ನೌಕರರು ತೀವ್ರ ಪ್ರತಿರೋಧ ವ್ಯಕ್ತಪಡಿಸಿರುತ್ತಾರೆ. ಈ ಸಂಬಂಧ ಸರ್ಕಾರಕ್ಕೆ ಅವಶ್ಯ ಮಾರ್ಗದರ್ಶನ ನೀಡುವಂತೆ ಸಂಘಕ್ಕೆ ಒತ್ತಾಯ ತಂದಿರುತ್ತಾರೆ.

ಈ ಸಂಬಂಧವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಸಂಘದ ವತಿಯಿಂದ ಸರ್ಕಾರವು  ಜಾರಿಗೆ ತರಲು ಹೊರಟಿರುವ ಮೇಲ್ಕಂಡ ನಡತೆ ನಿಯಮಗಳ ಈ ಕೆಳಕಂಡ ವಿಷಯಗಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಿದ್ದು, ಅದರಂತೆ ಕ್ರಮವಹಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ.


ಸರ್ಕಾರಿ ನೌಕರನ/ನೌಕರಳ ಪತ್ನಿ ಅಥವಾ ಪತಿಗೆ ರಕ್ತ ಸಂಬಂಧ ಅಥವಾ ವಿವಾಹದ ಮೂಲಕ ಸಂಬಂಧಿಗಳಾಗುತ್ತಾರೆ ಎಂಬ ನಿಯಮವನ್ನು ಕೈಬಿಡುವುದು.
ರಾಜ್ಯ ಸರ್ಕಾರಿ ನೌಕರನನ್ನು ಅವಲಂಬಿಸಿರುವ ಕುಟುಂಬದ ಯಾವೊಬ್ಬ ಸದಸ್ಯನೂ ಯಾವುದೇ ರಾಜಕೀಯ ಪಕ್ಷದ ಚುನಾವಣೆ ಪ್ರಕ್ರಿಯೆಗಳಲ್ಲಿ ಭಾಗವಹಿಸಬಾರದೆಂಬ ನಿಯಮವನ್ನು ತೆಗೆದುಹಾಕುವುದು
ರಾಜಕೀಯೇತರ ಸಂಘ-ಸಂಸ್ಥೆ ಹಾಗೂ ಕ್ರೀಡಾ ಸಂಸ್ಥೆಗಳ ಚುನಾವಣೆಗಳಲ್ಲಿ ಭಾಗವಹಿಸಲು ವಿಧಿಸಿರುವ ನಿರ್ಬಂಧವನ್ನು ಕೈಬಿಡುವುದು. 
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ವಿದೇಶ ಪ್ರವಾಸ ಮಾಡಲು ನೀಡಿರುವ ಅವಕಾಶವನ್ನು ರಾಜ್ಯ ಸರ್ಕಾರಿ ನೌಕರರಿಗೂ ಅನ್ವಯಿಸಿ, ನೌಕರನು ವಿದೇಶ ಪ್ರವಾಸ ಉದ್ದೇಶಕ್ಕೆ ಅರ್ಜಿ ಸಲ್ಲಿಸಿದ 21 ದಿನದೊಳಗಾಗಿ ಅನುಮೋದನೆ ದೊರೆತಿದೆ ಎಂದು ಪರಿಗಣಿಸುವುದು.
ಸರ್ಕಾರಿ ನೌಕರರಿಗೆ ಕಲಾತ್ಮಕ, ಸಾಹಿತ್ಯಿಕ ಮತ್ತು ವೈಜ್ಞಾನಿಕ ಪ್ರವೃತ್ತಿಗೆ ಉತ್ತೇಜನ ನೀಡುವುದರ ಜೊತೆಗೆ, ಪತ್ರಿಕೆ, ಆಕಾಶವಾಣಿ ದೂರದರ್ಶನದ ಹಾಗೂ ಯಾವುದೇ ಬಗೆಯ ಪ್ರದರ್ಶನ ಕಲೆಗಳು ಅಥವಾ ಸಮೂಹ ಮಾಧ್ಯಮಗಳು ಅಥವಾ ಪುಸ್ತಕ, ಲೇಖನ ಮುಂತಾದವುಗಳ ಪ್ರಕಟಣೆಯಲ್ಲಿ ಭಾಗವಹಿಸುವಿಕೆಯನ್ನು ನಿರ್ಬಂಧಿಸಬಾರದು.
ಸರ್ಕಾರಿ ನೌಕರರು ಚರ-ಸ್ಥಿರಾಸ್ತಿ ಖರೀದಿ/ ಮಾರಾಟ ಮಾಡಲು ಸರ್ಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂಬ ನಿಯಮವನ್ನು ಕೈಬಿಟ್ಟು, ಖರೀದಿ/ಮಾರಾಟ  ನಂತರ ಸರ್ಕಾರಕ್ಕೆ  ಅಥವಾ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲು ಅವಕಾಶ ಕಲ್ಪಿಸುವುದು.
ಸರ್ಕಾರಿ ನೌಕರನು ಯಾವುದೇ ವಿಶೇಷ ಸಂದರ್ಭಗಳಲ್ಲಿ ಉಡುಗೊರೆಗಳನ್ನು ಪಡೆಯಲು ನಿಗದಿಪಡಿಸಿರುವ ಆರ್ಥಿಕ  ನಿರ್ಬಂಧವನ್ನು ಸಡಿಲಿಸಿ ಹಾಗೂ ಪ್ರಸ್ತುತ ಪರಿಸ್ಥಿಗನುಗುಣವಾಗಿ ಸರ್ಕಾರಿ ನೌಕರನು ಪಡೆಯುವ ಎರಡು ತಿಂಗಳ ವೇತನದ ಮೊತ್ತದಷ್ಟು ಮೌಲ್ಯದ ಉಡುಗೊರೆಯನ್ನು ಪಡೆಯಲು ಅವಕಾಶ ಕಲ್ಪಿಸುವುದು. 
ಸರ್ಕಾರಿ ನೌಕರನ ಅವಲಂಭಿತರು ವ್ಯಾಪಾರ/ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ವಿಧಿಸಿರುವ ನಿರ್ಬಂಧವನ್ನು ಕೈಬಿಡುವುದು. 


Facebook         Telegram:t.me/ksgeabangalore,      Blogspot.     Website.    WhatsApp      Youtube 

@syedKSGEA

Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers