Skip to main content

Posts

Showing posts from May, 2021

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ (ಜನ್ಮದಿನಾಂಕ ಜನ್ಮದಾಖಲೆಯ ಪ್ರಕಾರವೇ ಸೇವಾಪುಸ್ತಕದಲ್ಲಿ ನಮೂದಿಸಬಹುದೆ ?)

  ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. ಪ್ರಶ್ನೆ  ನನ್ನ ಶಾಲಾ ದಾಖಲಾತಿಯಲ್ಲಿ ಜನ್ಮದಿನಾಂಕ 01 ಜೂನ್ 1963 ಎಂದಿದೆ . ಆದರೆ ನನ್ನ ಜನ್ಮದಾಖಲೆ ಪಡೆದು ನೋಡಿದಾಗ ನಿಜವಾದ ದಿನಾಂಕ 29 ಆಗಸ್ಟ್ 1963 ಎಂದಿದೆ . ನನ್ನ ಸೇವಾಪುಸ್ತಕದಲ್ಲಿ ಶಾಲಾ ದಾಖಲಾತಿಯಲ್ಲಿನ ಜನ್ಮದಿನಾಂಕವೇ ಇರುವುದರಿಂದ ಮೂರು ತಿಂಗಳ ಮೊದಲೇ ನಿವೃತ್ತನಾಗುತ್ತೇನೆ . ಜನ್ಮದಿನಾಂಕವನ್ನು ಜನ್ಮದಾಖಲೆಯ ಪ್ರಕಾರವೇ ಸೇವಾಪುಸ್ತಕದಲ್ಲಿ ನಮೂದಿಸಬಹುದೆ ? | ಎನ್.ಐ. ಗೌಡ ಸಿದ್ದಾಪುರ , ಉ . ಕ .  ಕರ್ನಾಟಕ ರಾಜ್ಯ ಸೇವಕರ ನೌಕರರ ( ವಯೋನಿರ್ಧಾರ ) ಅಧಿನಿಯಮ 1974 ರ ಮೇರೆಗೆ ಸರ್ಕಾರಿ ನೌಕರನು ಸರ್ಕಾರಿ ಸೇವೆಗೆ ಕಲಂ 3 ರ ಪರಂತುಕದ ಮೇರೆಗೆ ಸರ್ಕಾರಿ ನೌಕರ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೆ ಆ ಪ್ರಮಾಣಪತ್ರದಲ್ಲಿ ನಮೂದಿಸಿರುವ ಜನ್ಮದಿನಾಂಕವನ್ನೇ ಪರಿಗಣಿಸಬೇಕಾಗುತ್ತದೆ . ಈ ಜನ್ಮದಿನಾಂಕವನ್ನು ಪ್ರಕರಣ 5 ರ ಮೇರೆಗೆ ನ್ಯಾಯಾಲಯದ ಡಿಕ್ರಿ ಮೂಲಕ ಸೇವೆಗೆ ಸೇರಿದ ಮೂರು ವರ್ಷದೊಳಗೆ ಬದಲಾಯಿಸಬಹುದು . ಆದರೆ ನಿಮ್ಮ ವಿಚಾರದಲ್ಲಿ ಕಾಲಮಿತಿ ಮೀರಿರುವುದರಿಂದ ಪ್ರಸ್ತುತ ಬದಲಾವಣೆ ಸಾಧ್ಯವಿಲ್ಲ . . ಹೆಚ್ಚಿನ ವಿವರಗಳಿಗೆ ಇದೇ  . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು 'ಪುಸ್ತಕ ನೋಡಬಹುದು . KCSR Book ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉಳಿದ ವೃಂದಗಳ ಎಲ್ಲಾ ಸಿಬ್ಬಂದಿಗಳಿಗೂ ' ರಿಸ್ಕ್ ಅಲೋಯನ್ಸ್ ' ಮಂಜೂರು ಮಾಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉಳಿದ ವೃಂದಗಳ ಎಲ್ಲಾ ಸಿಬ್ಬಂದಿಗಳಿಗೂ ' ರಿಸ್ಕ್ ಅಲೋಯನ್ಸ್ ' ಮಂಜೂರು ಮಾಡುವ ಬಗ್ಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಶುಶ್ರೂಕರು / ಗ್ರೂಪ್ ' ಡಿ ' ಹಾಗೂ ಹೊರಗುತ್ತಿಗೆ / ಗುತ್ತಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು  ' ರಿಸ್ಟ್ ಅಲೋಯನ್ಸ್ ' ಮಂಜೂರು ಮಾಡಿರುತ್ತದೆ . ಇದಕ್ಕಾಗಿ ತಮಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ . ಕೋವಿಡ್ -19 ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಉಳಿದ ವೃಂದಗಳಾದ ಪ್ರಯೋಗಶಾಲಾ ತಂತ್ರಜ್ಞರು / ಆರೋಗ್ಯ ಸಹಾಯಕರು ( ಪು & ಮ ) / ಫಾರಸಿಸ್ಟ್ / ಆರೋಗ್ಯ ಶಿಕ್ಷಣಾಧಿಕಾರಿಗಳು / ಕ್ಷ - ಕಿರಣ ತಂತ್ರಜ್ಞರು / ನೇತ್ರಾಧಿಕಾರಿಗಳು / ವಾಹನ ಚಾಲಕರು / ಫಿಜಿಯೋಥೆರಪಿಸ್ಟ್ ವೃಂದ ಸೇರಿದಂತೆ ಹಲವು ವೃಂದಗಳಿಗೆ ' ರಿಸ್ಟ್ ಅಲೋಯನ್ಸ್ ' ಮಂಜೂರು ಮಾಡದಿರುವುದರಿಂದ , ಒಂದೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಧ್ಯೆ ತಾರತಮ್ಯ ಉಂಟಾಗಿ ಕರ್ತವ್ಯ ನಿರ್ವಹಣೆ ಮೇಲೆ ದುಷ್ಪರಿಣಾಮ ಬೀರಲಿರುವ ಅಂಶವನ್ನು ಗಮನಿಸಲಾಗಿದೆ . ಈ ಬಗ್ಗೆ ಉಲ್ಲೇಖ -2 ರ ಪತ್ರದನ್ವಯ ಇಲಾಖಾ ನೌಕರರ ಕೇಂದ್ರ ಸಂಘವು ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಆರೋಗ್ಯ ಸಹಾಯಕ ವೃಂದ ಮತ್ತು ಪೋಷಕ ವೃಂದಗಳ ಪದನಾಮವನ್ನು ಬದಲಾವಣೆ ಮಾಡಿ ಸರ್ಕಾರದಿಂದ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು,

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಆರೋಗ್ಯ ಸಹಾಯಕ ವೃಂದ ಮತ್ತು ಪೋಷಕ ವೃಂದಗಳ ಪದನಾಮವನ್ನು ಬದಲಾವಣೆ ಮಾಡಿ ಸರ್ಕಾರದಿಂದ ಆದೇಶ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು. - ಶ್ರೀ ಸಿ.ಎಸ್. ಷಡಾಕ್ಷರಿ, ರಾಜ್ಯಾಧ್ಯಕ್ಷರು, 

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. (ಸರ್ಕಾರಿ ನೌಕರ ಶನಿವಾರ ಹಾಗೂ ಸೋಮವಾರದಂದು ಸಾಂರ್ದಭಿಕ ರಜೆ ತೆಗೆದುಕೊಂಡರೆ ಸಾರ್ವತ್ರಿಕ ರಜೆಯಾದ ಭಾನುವಾರವೂ ಸಾಂರ್ದಭಿಕ ರಜೆಯೆಂದು ಪರಿಗಣಿಸಲಾಗುತ್ತದೆಯೇ ?)

 ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. ಪ್ರಶ್ನೆ  ಸರ್ಕಾರಿ ನೌಕರ ಶನಿವಾರ ಹಾಗೂ ಸೋಮವಾರದಂದು ಸಾಂರ್ದಭಿಕ ರಜೆ ತೆಗೆದುಕೊಂಡರೆ ಸಾರ್ವತ್ರಿಕ ರಜೆಯಾದ ಭಾನುವಾರವೂ ಸಾಂರ್ದಭಿಕ ರಜೆಯೆಂದು ಪರಿಗಣಿಸಲಾಗುತ್ತದೆಯೇ ? | ಮಕ್ಕೂಲ್ ಲಿಂಗದಹಳ್ಳಿ , ಹಾನಗಲ್  ಕರ್ನಾಟಕ ಸರ್ಕಾರಿ ಸೇವಾ ನಿಯಮಾವಳಿಯ  ಅನುಬಂಧ ಬಿ ಯಲ್ಲಿ ಪ್ರತಿ ಸರ್ಕಾರಿ ನೌಕರನಿಗೆ ಒಂದು ವರ್ಷ ಪೂರೈಸಿದ ಮೇಲೆ 15 ದಿನ ಸಾಂರ್ದಭಿಕ ರಜೆ ನೀಡಲಾಗುತ್ತದೆ . ನೀವು ಶನಿವಾರ ಮತ್ತು ಸೋಮವಾರ ರಜೆ ತೆಗೆದುಕೊಂಡರೆ ಭಾನುವಾರ ಸಾಂರ್ದಭಿಕ ರಜೆಯೆಂದು ಪರಿಗಣಿಸಲಾಗುವುದಿಲ್ಲ . ಅಂತೆಯೇ , ಯಾವುದೇ ಸಾರ್ವತ್ರಿಕರಜೆಗಳ ಮಧ್ಯೆ ಈ ಸಾಂರ್ದಭಿಕ ರಜೆ ಬಳಸಿಕೊಂಡರೆ ಅಂತಹ ಸಾರ್ವತ್ರಿಕ ರಜೆದಿನಗಳನ್ನು ಸಾಂರ್ದಭಿಕ ರಜೆ ಎಂದು ಪರಿಗಣಿಸದೆ ಬಳಸಿಕೊಳ್ಳಲು ಅನುಮತಿಸಲ್ಪಟ್ಟಿರುತ್ತದೆ . ಹೆಚ್ಚಿನ ವಿವರಗಳಿಗೆ ಇದೇ  . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು 'ಪುಸ್ತಕ ನೋಡಬಹುದು . ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು    ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ. ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ. https://mydukaan.io/ksgeanews ಪ್ರತಿವಾರ ಹೊಸ ಪ್ರಶ್ನೋತ್ತರಗಳು ಬ್ಲಾಗ್ ನಲ್ಲಿ ಲಭ್ಯವಿರುತ...

ಆರೋಗ್ಯ ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೂ ಪ್ರಥಮ ಆದ್ಯತೆ ಮೇಲೆ ಲಸಿಕೆ ಹಾಗೂ ಸುರಕ್ಷತಾ ಕಿಟ್ಟುಗಳನ್ನು ವಿತರಿಸಲು ಮಾನ್ಯ ಮುಖ್ಯ ಮಂತ್ರಿಗಳು ಸೂಚನೆ

ಆರೋಗ್ಯ ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೂ ಪ್ರಥಮ ಆದ್ಯತೆ ಮೇಲೆ ಲಸಿಕೆ ಹಾಗೂ ಸುರಕ್ಷತಾ ಕಿಟ್ಟುಗಳನ್ನು ವಿತರಿಸಲು ಮಾನ್ಯ ಮುಖ್ಯ ಮಂತ್ರಿಗಳು  ಸೂಚನೆ ಕೋವಿಡ್-19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್ಟುಗಳನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ನೀಡಿ, ಸರ್ಕಾರವು ರಾಜ್ಯದಲ್ಲಿ ವ್ಯಾಪಿಸುತ್ತಿರುವ ಕೋವಿಡ್-19 2ನೇ ಅಲೆ ಸೋಂಕು ನಿವಾರಣೆಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಸರ್ಕಾರವು ಸೋಂಕು ನಿವಾರಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಪೊಲೀಸ್, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಶಿಕ್ಷಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ನೌಕರರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದ್ದರಿಂದ ಅಂತಹ ನೌಕರರಿಗೂ ಸುರಕ್ಷತಾ ಕಿಟ್ಟುಗಳನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿ...

18 ವರ್ಷ ಮೇಲ್ಪಟ್ಟ ಎಲ್ಲಾ ಕೋವಿಡ್ ಕರ್ತವ್ಯನಿರತ ಅಧಿಕಾರಿ ಹಾಗೂ ನೌಕರರಿಗೆ ಶೀಘ್ರ ಲಸಿಕೆ ನೀಡುವ ಕಾರ್ಯ ಪ್ರಾರಂಭವಾಗಲಿದೆ .

ಸಂಘದ ಮನವಿಯಂತೆ 18 ವರ್ಷ ಮೇಲ್ಪಟ್ಟ ಎಲ್ಲಾ ಕೋವಿಡ್ ಕರ್ತವ್ಯನಿರತ ಅಧಿಕಾರಿ ಹಾಗೂ ನೌಕರರಿಗೆ ಪ್ರಥಮ ಆದ್ಯತೆ ಮೇಲೆ ಲಸಿಕೆ ನೀಡುವಂತೆ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಕಾರ್ಯದರ್ಶಿಗಳು ಸೂಚಿಸಿರುತ್ತಾರೆ .  18 ವರ್ಷ ಮೇಲ್ಪಟ್ಟ ಎಲ್ಲಾ ಕೋವಿಡ್ ಕರ್ತವ್ಯನಿ ರತ ಅಧಿಕಾರಿ ಹಾಗೂ ನೌಕರರಿಗೆ ಶೀಘ್ರ ಲಸಿಕೆ ನೀಡುವ ಕಾರ್ಯ ಪ್ರಾರಂಭವಾಗಲಿದೆ .

ಸಂಘದ ಮನವಿಯಂತೆ ಕೋವಿಡ್ ಕರ್ತವ್ಯನಿರತ ಅಧಿಕಾರಿ ಹಾಗೂ ನೌಕರರಿಗೆ ಸುರಕ್ಷತಾ ಕಿಟ್ ಗಳನ್ನು ಒದಗಿಸುವಂತೆಯೂ ಹಾಗೂ ಸೋಂಕಿನ ಒಳಗಾದ ಸಿಬ್ಬಂದಿಗಳಿಗೆ ವೆಂಟಿಲೇಟರ್ ಸೌಲಭ್ಯವಿರುವ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಮಾನ್ಯ ಮುಖ್ಯ ಮಂತ್ರಿಗಳ ಹಾಗೂ ಮುಖ್ಯ ಕಾರ್ಯದರ್ಶಿಗಳು ಸೂಚಿಸಿರುತ್ತಾರೆ .

ಸಂಘದ ಮನವಿಯಂತೆ ಕೋವಿಡ್ ಕರ್ತವ್ಯನಿರತ ಅಧಿಕಾರಿ ಹಾಗೂ ನೌಕರರಿಗೆ ಸುರಕ್ಷತಾ ಕಿಟ್ ಗಳನ್ನು ಒದಗಿಸುವಂತೆಯೂ ಹಾಗೂ ಸೋಂಕಿನ ಒಳಗಾದ ಸಿಬ್ಬಂದಿಗಳಿಗೆ ವೆಂಟಿಲೇಟರ್ ಸೌಲಭ್ಯವಿರುವ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಮಾನ್ಯ ಮುಖ್ಯ ಮಂತ್ರಿಗಳ ಹಾಗೂ ಮುಖ್ಯ ಕಾರ್ಯದರ್ಶಿಗಳು ಸೂಚಿಸಿರುತ್ತಾರೆ .

ಕೋವಿಡ್ -19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರೂ ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್'ಗಳನ್ನು ವಿತರಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೇಂದ್ರ ಸಂಘದಿಂದ ಮನವಿ

ಕೋವಿಡ್ -19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರೂ ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್'ಗಳನ್ನು ವಿತರಿಸುವ ಬಗ್ಗೆ  ಮಾನ್ಯ ಮುಖ್ಯಮಂತ್ರಿಗಳಿಗೆ ಕೇಂದ್ರ ಸಂಘದಿಂದ ಮನವಿ  ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ವ್ಯಾಪಿಸುತ್ತಿರುವ ಕೋವಿಡ್ -19 ಎರಡನೇ ಅಲೆ ಸೋಂಕು ನಿವಾರಣೆಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವುದು ಸ್ವಾಗತಾರ್ಹ . ಸರ್ಕಾರವು ಸೋಂಕು ನಿವಾರಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರು ಅದರಲ್ಲೂ ವಿಶೇಷವಾಗಿ ಪೊಲೀಸ್ , ಆರೋಗ್ಯ ಕಂದಾಯ , ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ , ಶಿಕ್ಷಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ / ನೌಕರರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿದ್ದಾರೆ . ಕೋವಿಡ್ -19 ಕರ್ತವ್ಯನಿರತ ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಹಲವರು ಸೋಂಕಿಗೆ ಸಿಲುಕಿ ಮರಣ ಹೊಂದುತ್ತಿರುವ ಪ್ರಕರಣಗಳು ದಿನೇ ದಿನೇ ವರದಿಯಾಗುತ್ತಿವೆ , ಕೋವಿಡ್ -19 ಕರ್ತವ್ಯನಿರತ ಸರ್ಕಾರಿ ಅಧಿಕಾರಿ / ನೌಕರರ ಸುರಕ್ಷತೆ ದೃಷ್ಟಿಯಿಂದ ವಿಶೇಷವಾಗಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಆರೋಗ್ಯ ಸಹಾಯಕರೂ ಸೇರಿದಂತೆ ಇತರೆ ಎಲ್ಲಾ ಇಲಾಖೆಗಳ ಅಧಿಕಾರಿ / ನೌಕರ ಆರೋಗ್ಯ ಕಾಪಾಡುವ ಹಿನ್ನೆಲೆ...

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ (30 ವರ್ಷಗಳ ಹೆಚ್ಚುವರಿ ವೇತನ ಬಡ್ತಿ )

 ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. ಪ್ರಶ್ನೆ  1988 ರ ಜುಲೈನಲ್ಲಿ ನಾನು ಸರ್ಕಾರಿ ಕೆಲಸಕ್ಕೆ ಸೇರಿದ್ದು , ಈಗಿನ ವೇತನ ಶ್ರೇಣಿ 52,650-97,100 ರೂ . ಆಗಿದೆ . 2018 ರ ಜುಲೈವರೆಗೆ 30 ವರ್ಷ ಕಾಲ ಕರ್ತವ್ಯವನ್ನು ಯಾವುದೇ ಪದೋನ್ನತಿ ಇಲ್ಲದೆ ಪೂರೈಸಿರುತ್ತೇನೆ . ಈವರೆಗೂ ನನಗೆ 30 ವರ್ಷಗಳ ಹೆಚ್ಚುವರಿ ವೇತನ ಬಡ್ತಿ ನೀಡಲಾಗಿಲ್ಲ . ಹಾಗಾಗಿ ಇದನ್ನು ನಿಯಮಾನುಸಾರ ಪಡೆಯಲು ಅವಕಾಶವಿದೆಯೇ ? | ಕೆ . ರಮೇಶ್ ಬಸಾಪುರ , ಬೆಂಗಳೂರು 2012 , ಜೂ .14 ರ ಸರ್ಕಾರಿ ಆದೇಶ ಸಂಖ್ಯೆ ಎಫ್‌ಡಿ 12 , ಎಸ್‌ಆರ್‌ಪಿ 2012 ( 8 ) ರ ಪ್ರಕಾರ ಸತತವಾಗಿ 30 ವರ್ಷ ಕಾಲ ಯಾವುದೇ ಪದೋನ್ನತಿ ಇಲ್ಲದೆ ಕರ್ತವ್ಯ ಸಲ್ಲಿಸಿದ್ದರೆ ಅಂಥ ನೌಕರರಿಗೆ ಹೆಚ್ಚುವರಿಯಾಗಿ ಒಂದು ವೇತನ ಬಡ್ತಿ ಮಂಜೂರು ಮಾಡಬೇಕೆಂದು ಸೂಚಿಸಿದೆ . ಈ ರೀತಿ ಮಂಜೂರು ಮಾಡುವ ಸರ್ಕಾರಿ ನೌಕರನ ಸೇವಾ ದಾಖಲೆ ತೃಪ್ತಿಕರವಾಗಿದ್ದು , ಪದೋನ್ನತಿಗೆ ಎಲ್ಲ ರೀತಿಯಲ್ಲೂ ಅರ್ಹರಾಗಿರಬೇಕು . ಹಾಗಾಗಿ ನಿಮ್ಮ ನೇಮಕಾತಿ ಪ್ರಾಧಿಕಾರಕ್ಕೆ ಈ ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡಲು ವಿನಂತಿಸಬಹುದು . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ನಿಯಮಗಳು 'ಪುಸ್ತಕ ನೋಡಬಹುದು . ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು    ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ. ಲ.ರಾಘವೇಂದ್ರರವರ ಸೇವ...

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. (ಸರ್ಕಾರಿ ನೌಕರರು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಯಸಿದ್ದೇನೆ . ಈ ಹುದ್ದೆಗೆ ವಯೋಮಿತಿ ನಿರ್ಬಂಧವಿದೆಯೇ ?)

 ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. ಪ್ರಶ್ನೆ  ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನಾಗಿರುವ ನನಗೆ 38 ವರ್ಷ ವಯಸ್ಸಾಗಿದೆ . ಈಗ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಯಸಿದ್ದೇನೆ . ಈ ಹುದ್ದೆಗೆ ವಯೋಮಿತಿ ನಿರ್ಬಂಧವಿದೆಯೇ ? ಗರಿಷ್ಠ ವಯೋಮಿತಿ ಎಷ್ಟು ? ಸಡಿಲಿಕೆ ಉಂಟೆ ? | ಸುನಿಲ್ ಕುಮಾರ್ ಚಿತ್ರದುರ್ಗ ಕರ್ನಾಟಕ ಸರ್ಕಾರಿ ಸೇವಾ ( ಸಾಮಾನ್ಯ ನೇಮಕಾತಿ ) ನಿಯಮಾವಳಿ 1977 ರ ನಿಯಮ 6 ( 1 ) ರ ಪ್ರಕಾರ ಸರ್ಕಾರಿ ನೌಕರ ಎಷ್ಟು ವರ್ಷ ಕೆಲಸ ನಿರ್ವಹಿಸಿರುವನೋ ಅಷ್ಟು ವರ್ಷ ಅಥವಾ ಗರಿಷ್ಠ 10 ವರ್ಷ ವಯೋಮಿತಿ ಸಡಿಲಿಕೆ ಉಂಟು . ಆದರೆ , ಕಿರಿಯ ಪ್ರಾಥಮಿಕ ಅಥವಾ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಾಮಾನ್ಯವರ್ಗಕ್ಕೆ 40 ವರ್ಷ , ಹಿಂದುಳಿದ ವರ್ಗಕ್ಕೆ 43 , ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 45 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ . ಹಾಗಾಗಿ ನಿಮ್ಮ ನೇಮಕಾತಿ ಪ್ರಾಧಿಕಾರದ ಪೂರ್ವಾನುಮತಿ ಪಡೆದು ಅರ್ಜಿ ಸಲ್ಲಿಸಿದರೆ ವಯೋಮಿತಿ ಸಡಿಲಿಕೆ ಲಭ್ಯವಾಗುತ್ತದೆ . ಹೆಚ್ಚಿನ ವಿವರಗಳಿಗೆ ಇದೇ ಲೇಖಕರ ' ಕರ್ನಾಟಕ ಸರ್ಕಾರಿ ಸೇವಾ ಕಾನೂನು ಕೈಪಿಡಿ ' ಪುಸ್ತಕ ನೋಡಬಹುದು . ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು    ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ. ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ...

ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. (ಅನುಕಂಪದ ಆಧಾರದ ಮೇಲೆ ನೇಮಕಾತಿ)

 ಸರ್ಕಾರಿ ಕಾರ್ನರ್ ನೌಕರಿ ಕಿರಿಕಿರಿಗೆ ಪರಿಹಾರ: ಲ . ರಾಘವೇಂದ್ರ , ಸೇವಾ ಕಾನೂನು ತಜ್ಞರವರಿಂದ. ಪ್ರಶ್ನೆ ಸರ್ಕಾರಿ ಪ್ರಥಮ ದರ್ಜೆ ಸಹಾಯಕರಾಗಿದ್ದ ನನ್ನ ತಂದೆ , ಇನ್ನೂ ನಾಲ್ಕು ವರ್ಷ ಸೇವಾವಧಿ ಇರುವಾಗಲೇ 2018 ರ ಡಿ .2 ರಂದು ನಿಧನರಾದರು . ನನ್ನ ತಂದೆ ಅವರ ನಿಧನಾಂತರ ಅನುಕಂಪದ ಆಧಾರದ ಮೇಲೆ ಕೆಲಸ ಪಡೆದಿದ್ದರು . ಈಗ ನಾನು ಅನುಕಂಪದ ಆಧಾರದ ಮೇಲೆ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹನಾಗಿದ್ದೇನೆಯೇ ? | ನವೀನ್ ಬಾಗಲಕೋಟೆ ಕರ್ನಾಟಕ ಸರ್ಕಾರಿ ಸೇವಾ ( ಅನುಕಂಪದ ಮೇರೆಗೆ ನೇಮಕ ) ನಿಯಮಾವಳಿ 1996 ರ ನಿಯಮ 3 ರ ಪ್ರಕಾರ ಮೃತ ಸರ್ಕಾರಿ ನೌಕರನ ಅವಲಂಬಿತ ಪತ್ನಿ , ಮಗ ಅಥವಾ ಮಗಳು ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಅರ್ಹರಾಗಿರುತ್ತಾರೆ . ನಿಮ್ಮ ತಂದೆ ಅನುಕಂಪದ ಮೇರೆಗೆ ಹುದ್ದೆ ಪಡೆದಿದ್ದರೂ ನೀವು ಅವರಂತೆಯೇ ಅನುಕಂಪದ ಮೇರೆಗೆ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತೀರಿ . ಹಾಗಾಗಿ ನಿಮ್ಮ ತಂದೆ ನಿಧನ ದಿನಾಂಕದಿಂದ ಒಂದು ವರ್ಷದೊಳಗೆ ಅನುಕಂಪದ ಮೇರೆಗೆ ನೇಮಕಾತಿ ಹೊಂದಲು ಸಕ್ಷಮ ಪ್ರಾಧಿಕಾರಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು . ಕೃಪೆ : ವಿಜಯವಾಣಿ, ಕನ್ನಡ ದಿನಪತ್ರಿಕೆ. ಮತ್ತು    ಲ . ರಾಘವೇಂದ್ರ , ಸೇವಾ ಕಾನೂನು ತಜ್ಞ. ಲ.ರಾಘವೇಂದ್ರರವರ ಸೇವಾ ಸೌಲಭ್ಯಗಳ ಪುಸ್ತಕ ಗಳಿಗಾಗಿ ಈ ಕೆಳಗಿನ ಲಿಂಕ್ ಗೆ ಭೇಟಿ ನೀಡಿ. https://mydukaan.io/ksgeanews ಪ್ರತಿವಾರ ಹೊಸ ಪ್ರಶ್ನೋತ್ತರ...

ಕೋವಿಡ್ -19 ರ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯಂತೆ ಮುಂದೂಡಿರುವ ಬಗ್ಗೆ.

ಕೋವಿಡ್ -19 ರ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯಂತೆ ಮುಂದೂಡಿರುವ ಬಗ್ಗೆ.  ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 24-05-2021 ರಿಂದ ದಿನಾಂಕ 16-06-2021 ರವರೆಗೆ ನಡೆಸಲು ತೀರ್ಮಾನಿಸಿ ಉಲ್ಲೇಖ -1 ರ ಸುತ್ತೋಲೆಯ ಮೂಲಕ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು . ಆದರೆ ರಾಜ್ಯದಲ್ಲಿ ಕೋವಿಡ್ -19 ರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಸದರಿ ಕಾರ್ಯದಲ್ಲಿ ನಿರತರಾಗಿರುತ್ತಾರೆ . ನಮ್ಮ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಹ ಕೋವಿಡ್ -19 ರ ಕಾರ್ಯದಲ್ಲಿ ಪಾಲ್ಗೊಂಡಿರುತ್ತಾರೆ . ಎಲ್ಲಕ್ಕಿಂತ ಹೆಚ್ಚಾಗಿ ಇಂದಿನ ಕೋವಿಡ್ ಪರಿಸ್ಥಿತಿಗಳಲ್ಲಿ ವಿದ್ಯಾರ್ಥಿಗಳ ಕ್ಷೇಮ ಮುಖ್ಯವಾಗಿದ್ದು , ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳ ಆರೋಗ್ಯಕ್ಕೆ ಸೂಕ್ತವಲ್ಲವೆಂದು ಅಭಿಪ್ರಾಯಿಸಲಾಯಿತು . ಇದಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡುವಂತೆ ವಿದ್ಯಾರ್ಥಿಗಳು , ಪೋಷಕರು ಹಾಗೂ ಹಲವಾರು ಸಂಘ ಸಂಸ್ಥೆಗಳಿಂದ ಮನವಿಗಳು ಸ್ವೀಕೃತವಾಗಿರುತ್ತವೆ . ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಇಲಾಖೆ...

ಕೋವಿಡ್‌ನ ತೀವ್ರತೆಯ ಹಿನ್ನಲೆಯಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಾನ್ಯ‌‌ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಕೋವಿಡ್‌ನ ತೀವ್ರತೆಯ ಹಿನ್ನಲೆಯಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಬಗ್ಗೆ .   ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದೇ ಮೇ 24 ರಿಂದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿದ್ದು , ಕಳೆದ ವರ್ಷ ಕೋವಿಡ್ ಆತಂಕದ ನಡುವೆಯು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಯಶಸ್ವಿಯಾಗಿ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯವನ್ನು ನಡೆಸಿ , ಕರ್ತವ್ಯ ನಿಷ್ಠೆಯನ್ನು ಮೆರೆದಿರುವುದು ತಮಗೆ ತಿಳಿದಿರುವ ವಿಷಯವೇ ಆಗಿರುತ್ತದೆ . ಆದರೆ ಪ್ರಸ್ತುತ ಸಂದರ್ಭದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ತೀವ್ರಗತಿಯಲ್ಲಿ ಹರಡುತ್ತಿದ್ದು , ಅನೇಕ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕೋವಿಡ್‌ಗೆ ತುತ್ತಾಗಿರುತ್ತಾರೆ . ಇಂತಹ ಗಂಭೀರ ಪರಿಸ್ಥಿತಿಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಸುವುದಾಗಲಿ , ಮೌಲ್ಯಮಾಪನ ಮಾಡಿಸುವುದಾಗಲಿ ವಿದ್ಯಾರ್ಥಿಗಳು , ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಹಿತದೃಷ್ಟಿಯಿಂದ ಅಪಾಯಕಾರಿ ತೀರ್ಮಾನವಾಗಿರುತ್ತದೆ . ಆದ ಕಾರಣ ಕೋವಿಡ್ ತೀವ್ರತೆಯು ನಿಯಂತ್ರಣಕ್ಕೆ ಬರುವವರೆಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದಿಂದ  ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers