ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ. ಇವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸರ್ಕಾರಿ ನೌಕರರ ಆಡಳಿತಾತ್ಮಕ ವಿಷಯಗಳ ಬಗ್ಗೆ ಕೈಗೊಂಡ ನಿರ್ಣಯಗಳು .
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ. ಇವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸರ್ಕಾರಿ ನೌಕರರ ಆಡಳಿತಾತ್ಮಕ ವಿಷಯಗಳ ಬಗ್ಗೆ ಕೈಗೊಂಡ ನಿರ್ಣಯಗಳು .
ದಿನಾಂಕ : 28-10-2021 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ ಅಧ್ಯಕ್ಷತೆಯಲ್ಲಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಮನೀಶ್ ಮಲ್ ಭಾ.ಆ.ಸೇ. , ಇವರ ಉಪಸ್ಥಿತಿಯಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ . ಷಡಾಕ್ಷರಿಯವರು ಹಾಗೂ ವಿವಿಧ ಇಲಾಖೆಯ ಸದಸ್ಯರೊಂದಿಗೆ ರಾಜ್ಯದ ಸರ್ಕಾರಿ ನೌಕರರ ಹಲವಾರು ಬೇಡಿಕೆಗಳ ಬಗ್ಗೆ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು .
ದಿನಾಂಕ : 28-10-2021 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಅಮಿತಾ ಪ್ರಸಾದ್ ಭಾ.ಆ.ಸೇ ಅಧ್ಯಕ್ಷತೆಯಲ್ಲಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಮನೀಶ್ ಮಲ್ ಭಾ.ಆ.ಸೇ. , ಇವರ ಉಪಸ್ಥಿತಿಯಲ್ಲಿ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ . ಷಡಾಕ್ಷರಿಯವರು ಹಾಗೂ ವಿವಿಧ ಇಲಾಖೆಯ ಸದಸ್ಯರೊಂದಿಗೆ ರಾಜ್ಯದ ಸರ್ಕಾರಿ ನೌಕರರ ಹಲವಾರು ಬೇಡಿಕೆಗಳ ಬಗ್ಗೆ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು .
ಸಭೆಯು ಈ ಕೆಳಕಂಡ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಣಯಿಸಿದ ನಂತರ ಸೂಕ್ತ ಆದೇಶಗಳನ್ನು ಹೊರಡಿಸಲು ಸಮಿತಿಯ ಅಧ್ಯಕ್ಷರು ಸಂಬಂಧಿಸಿದವರಿಗೆ ಸೂಚನೆ ನೀಡಿದರು .

- ಎಲ್ಲಾ ಇಲಾಖೆಗಳಲ್ಲಿ ಪ್ರತಿ ವರ್ಷ ಮೊದಲ ತಿಂಗಳಿನಲ್ಲಿ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸುವುದು ಹಾಗೂ ಪ್ರತಿ ಆರು ತಿಂಗಳಿಗೊಮ್ಮೆ ಮುಂಬಡ್ತಿ ಕೋಟಾದ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡಲು ತೀರ್ಮಾನಿಸಲಾಯಿತು .
- ಎಲ್ಲಾ ಇಲಾಖೆಗಳಲ್ಲಿ ನೌಕರರಿಗೆ ಸಂಬಂಧಿಸಿದ ಇಲಾಖಾ ವಿಚಾರಣೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಲು ' ಲೋಕ ಅದಾಲತ್ ' ಮಾದರಿಯಲ್ಲಿ ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಬಾಕಿ ಇರುವ ಸರ್ಕಾರಿ ನೌಕರರ ಇಲಾಖಾ ವಿಚಾರಣೆಗಳನ್ನು ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ತೀರ್ಮಾನಿಸಲಾಯಿತು .
- ಸರ್ಕಾರಿ ನೌಕರರು ಇನ್ನು ಮುಂದೆ ಪಾಸ್ಪೋರ್ಟ್ಗಳ N.O.C. ಗಳನ್ನು ಸಂಬಂಧಿಸಿದ ಕಛೇರಿಯ ಮುಖ್ಯಸ್ಥರಿಂದ ಪಡೆಯುವ ಅವಕಾಶವನ್ನು ಜಾರಿಗೆ ತರಲು ತೀರ್ಮಾನಿಸಿತು .
- ಸರ್ಕಾರಿ ನೌಕರರು ಸೇವಾವಧಿಯಲ್ಲಿ ಚರ - ಸ್ಥಿರಾಸ್ತಿ ಖರೀದಿಸುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕೆಂಬ ನಿರ್ಬಂಧವನ್ನು ಸಡಿಲಿಸಿ , ಇನ್ನು ಮುಂದೆ ಸರ್ಕಾರಿ ಅಧಿಕಾರಿ / ನೌಕರರು ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ನಿರ್ಣಯಿಸಲಾಯಿತು.
- ಸರ್ಕಾರಿ ನೌಕರರು ಬೇರೆ ಇಲಾಖೆಗೆ ವರ್ಗಾವಣೆಗೊಂಡ ಸಂದರ್ಭಗಳಲ್ಲಿ ಚಾಲನಾದೇಶ / ಮರು ಸ್ಥಳನಿಯುಕ್ತಿ ಆದೇಶ ಪಡೆಯುವಲ್ಲಿ ವಿಳಂಬವಾಗುತ್ತಿದ್ದು , ಇನ್ನು ಮುಂದೆ ಕಾಲಮಿತಿಯೊಳಗೆ ಸ್ಥಳನಿಯುಕ್ತಿ ಆದೇಶವನ್ನು ಪಡೆಯಲು ಅವಕಾಶ ಕಲ್ಪಿಸಲು ನಿರ್ಣಯಿಸಲಾಯಿತು.
- ರಾಜ್ಯ ಸರ್ಕಾರಿ ನೌಕರರು ಜಿ.ಪಿ.ಎಫ್ ಉಳಿತಾಯ ಖಾತೆಗಳಿಂದ ಮುಂಗಡ / ಭಾಗಶ : ವಾಪಸಾತಿ ಪಡೆಯುವ ಸಂದರ್ಭದಲ್ಲಿ ಇದ್ದ ಕಠಿಣ ನಿಯಮಗಳನ್ನು ಸಡಿಲಿಸಿ ಸರಳೀಕರಣಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
- ಕೆ.ಜಿ.ಐ.ಡಿ. ವಿಮಾ ಪಾಲಿಸಿಗಳ ಮೆಚೂರಿಟಿ ಅವದಿ 55 ವರ್ಷ ಇದ್ದು , ಇದನ್ನು 60 ವರ್ಷಗಳವರೆಗೆ ವಿಸ್ತರಿಸಿ ವಿಮಾ ಸೌಲಭ್ಯವನ್ನು ನೀಡುವುದು .
- ರಾಜ್ಯ ಸರ್ಕಾರಿ ನೌಕರರ ಸಾಮೂಹಿಕ ವಿಮಾ ಯೋಜನೆ ( ಜಿ.ಐ.ಎಸ್ ) ಹಾಲಿ ಇರುವ ಮೊತ್ತವನ್ನು ಹೆಚ್ಚಳಗೊಳಿಸಿ ವಿಮಾ ಹಾಗೂ ಉಳಿತಾಯ ಮೊತ್ತವನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳ ಮಾಡಲು ನಿರ್ಣಯಿಸಲಾಯಿತು.
- 2016-2018ರವರೆಗಿನ ಎರಡು ವರ್ಷಗಳ ಕೆ.ಜಿ.ಐ.ಡಿ. ಬೋನಸ್ ಪಾವತಿಯ ಪ್ರಸ್ತಾವನೆಯನ್ನು ಶೀಘ್ರ ಇತ್ಯರ್ಥಗೊಳಿಸಲು ನಿರ್ಣಯಿಸಲಾಯಿತು.
- ಆರೋಗ್ಯ ಇಲಾಖೆಯ ಕೇಂದ್ರ ಪುರಸ್ಕೃತ 02-03 ಲೆಕ್ಕಶೀರ್ಷಿಕೆಯಲ್ಲಿ ಮಾಸಿಕ ವೇತನ ವಿಳಂಬವಾಗಿ ಆಗುತ್ತಿದ್ದು , ಇನ್ನು ಮುಂದೆ ಪ್ರತಿ ತಿಂಗಳು ವೇತನ , ಭತ್ಯೆಗಳು ಸಕಾಲದಲ್ಲಿ ಪಾವತಿಸುವ ಸಂಬಂಧ ಅಗತ್ಯ ಕ್ರಮವಹಿಸಲು ನಿರ್ಣಯಿಸಲಾಯಿತು .
- ರಾಜ್ಯ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ' ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ'ಯನ್ನು ಶೀಘ್ರ ಅನುಷ್ಠಾನಗೊಳಿಸಲು ನಿರ್ಣಯಿಸಲಾಯಿತು . ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದೊರೆಯಬಹುದಾದ ಎಲ್ಲಾ ಸೇವಾ ಸವಲತ್ತುಗಳನ್ನು ಆನ್ ಮೂಲಕ ನೀಡುವ ವ್ಯವಸ್ಥೆಯನ್ನು ಜಾರಿಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದ್ದು , ಆದಷ್ಟು ಬೇಗ ಜಾರಿಗೊಳಿಸಲು ನಿರ್ಣಯಿಸಲಾಯಿತು .
- ಹಲವಾರು ವರ್ಷಗಳಿಂದ ತಿದ್ದುಪಡಿಯಾಗದೆ ಬಾಕಿ ಇರುವ ಎಲ್ಲಾ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡುವುದು . ವಿಶೇಷವಾಗಿ ಶಿಕ್ಷಣ ಇಲಾಖೆಯ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗಳು ಪರಿಶೀಲನಾ ಹಂತದಲ್ಲಿದ್ದು , ಶೀಘ್ರವಾಗಿ ಅಂತಿಮಗೊಳಿಸಲು ನಿರ್ಣಯಿಸಲಾಯಿತು .


Comments
Post a Comment