ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ: 07-11-2021ರಂದು ನಡೆದ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ವೃಂದ ಸಂಘಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ದಿನಾಂಕ: 07-11-2021ರಂದು ನಡೆದ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳು.
ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (1-5ನೇ ತರಗತಿ) ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂದಿನ ಸೇವಾ ಜೇಷ್ಠತೆಯನ್ನು ಪರಿಗಣಿಸಿ 6-8ನೇ ತರಗತಿ ಶಾಲೆಗಳಿಗೆ ಮೇಲ್ದರ್ಜೆಗೇರಿಸಲು/ವೀಲಿನಗೊಳಿಸಲು ಕಾರ್ಯಕಾರಿ ಆದೇಶ ಹೊರಡಿಸುವ ಮೂಲಕ 75 ಸಾವಿರ ಪದವೀಧರ ಶಿಕ್ಷಕರುಗಳು ಹಲವಾರು ವರ್ಷಗಳ ಸಮಸ್ಯೆಯನ್ನು ಬಗೆಹರಿಸುವುದು.
1998-1999ರಲ್ಲಿ ಸೇವೆಗೆ ಸೇರ್ಪಡೆಗೊಂಡು, ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯಲದ ಆದೇಶದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಂಡ ಸುಮಾರು 4000 ಪ್ರಾಥಮಿಕ/ಪ್ರೌಡಶಾಲಾ ಶಿಕ್ಷಕರು 2003ರಲ್ಲಿ ಮರು ನೇಮಕಾತಿ ಹೊಂದಿದ್ದು, ಮರುನೇಮಕಾತಿ ಹೊಂದುವ ಪೂರ್ವದಲ್ಲಿ ಸಲ್ಲಿಸಿರುವ 4-5 ವರ್ಷಗಳ ಸೇವೆಯನ್ನು ಪರಿಗಣಿಸಿ ಕಾಲ್ಪನಿಕವಾಗಿ ವೇತನ ನಿಗದಿಗೊಳಿಸುವುದು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು, ಬಡ್ತಿ ಪ್ರೌಢಶಾಲಾ ಸಹ ಶಿಕ್ಷಕರು ಹಾಗೂ ಬಡ್ತಿ ಉಪನ್ಯಾಸಕರು ಪದೋನ್ನತಿ ಹೊಂದಿದ ಕಾರಣ 10,15,20,25 ಮತ್ತು 30 ವರ್ಷಗಳ ಕಾಲಮಿತಿ ಬಡ್ತಿ ಸೌಲಭ್ಯದಿಂದ ವಂಚಿತರಾಗಿರುತ್ತಾರೆ. ಇದರಿಂದಾಗಿ ಬಡ್ತಿ ಪಡೆಯದೆ ಇರುವವರಿಗಿಂತ 2-3 ವಾರ್ಷಿಕ ಕಡಿಮೆ ವೇತನ ಬಡ್ತಿಗಳನ್ನು ವೇತನ ಪಡೆಯುತ್ತಿರುವುದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ದವಾಗಿದೆ. ಈ ವೇತನ ತಾರತಮ್ಯವನ್ನು ಸರಿಪಡಿಸುವುದು.
ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆಯ ನೀತಿಯನ್ನು ಜಾರಿಗೆ ತರುವುದು. ಹಾಗೂ ಅಂತರ ಜಿಲ್ಲಾ ವರ್ಗಾವಣೆ ಹೊಂದಲು ‘ಒಂದು ಬಾರಿಗೆ’ (ಔ.ಖಿ.S.) ವರ್ಗಾವಣೆ ಅವಕಾಶ ಕಲ್ಪಿಸುವುದು.
ಬಿಡುವಿನ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವುದು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವೃಂದದಿAದ ಶಿಕ್ಷಣ ಸಂಯೋಜಕರ ಹುದ್ದೆಗೆ ನೇಮಿಸುವಾಗ ಸೇವಾ ಹಿರಿತವನ್ನು ಪರಿಗಣಿಸಿ ಜೇಷ್ಠತೆ ಆಧಾರದ ಮೇಲೆ ಈ ಹಿಂದಿನAತೆ ಪರೀಕ್ಷೆ ಇಲ್ಲದೆ ನೇಮಿಸುವುದು.
ಸುಮಾರು 40 ವರ್ಷಗಳಿಂದ ಪರಿಷ್ಕರಣೆಯಾಗದೆ ಬಾಕಿ ಇರುವ ಶಿಕ್ಷಣ ಇಲಾಖೆಯ ಎಲ್ಲಾ ವೃಂದಗಳನ್ನೊಳಗೊAಡAತೆ ಸಮಗ್ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕಾಲಮಿತಿಯೊಳಗೆ ರೂಪಿಸುವುದು.
ದಿನಾಂಕ: 01-08-2008ರ ನಂತರ ನೇಮಕವಾದ 2008, 2010 ಮತ್ತು 2013ರ ಬ್ಯಾಚ್ನ ಪ್ರೌಢಶಾಲಾ ಶಿಕ್ಷಕರುಗಳಿಗೆ ಒಂದು ವಾರ್ಷಿಕ ವೇತನ ಬಡ್ತಿ ನೀಡಿ ವೇತನ ತಾರತಮ್ಯ ನಿವಾರಿಸುವುದು.
ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆಯನ್ನು ಜಾರಿಗೆ ತರುವುದು.
ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದಕ್ಕೆ ಪದೋನ್ನತಿ ನೀಡುವ ಪ್ರಕ್ರಿಯೆ ಸುಮಾರು 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಈಗಾಗಲೇ ಅಂತಿಮಗೊಳಿಸಿರುವ ಅರ್ಹ ಪ್ರೌಢಶಾಲಾ ಸಹ ಶಿಕ್ಷಕರ ಜ್ಯೇಷ್ಠತಾ ಪಟ್ಟಿಗೆ ಅನುಗುಣವಾಗಿ ಮುಂಬಡ್ತಿಗೆ ಕ್ರಮವಹಿಸುವುದು.
ಈ ಮೇಲ್ಕಂಡ ಬೇಡಿಕೆ/ ಸಮಸ್ಯೆಗಳು 20 ವರ್ಷಗಳಿಂದ ಬಾಕಿ ಇದ್ದು, ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಹಲವಾರು ಬಾರಿ ಮನವಿಯನ್ನು ಸಲ್ಲಿಸಿರುವುದರ ಜೊತೆಗೆ, ಸರ್ಕಾರದ ಹಂತದಲ್ಲಿ ಹಲವಾರು ಬಾರಿ ಸಭೆಗಳಾಗಿದ್ದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಅಲ್ಲದೇ, ಯಾವೊಂದು ಬೇಡಿಕೆಯೂ ಈಡೇರಿರುವುದಿಲ್ಲ.
ಈ ಸಂಬ0ಧವಾಗಿ ಇಂದು ನಡೆದ ಸಭೆಯಲ್ಲಿ ಮೇಲ್ಕಂಡ ಬೇಡಿಕೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಸರ್ಕಾರವು 21 ದಿನಗಳ ಒಳಗಾಗಿ ಮೇಲ್ಕಂಡ ಬೇಡಿಕೆಗಳಿಗೆ ಪರಿಹಾರ/ನ್ಯಾಯ ದೊರಕಿಸಿಕೊಡದಿದ್ದ ಪಕ್ಷದಲ್ಲಿ ಅನಿವಾರ್ಯವಾಗಿ ರಾಜ್ಯಾದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟ ಮಾಡಬೇಕೆಂಬ ತೀರ್ಮಾನವನ್ನು ಸಭೆಯಲ್ಲಿ ಭಾಗವಹಿಸಿದ ರಾಜ್ಯದ ಸುಮಾರು 5000 ಸಂಘದ ಪದಾಧಿಕಾರಿಗಳು, ಶಿಕ್ಷಕರನ್ನು ಪ್ರತಿನಿಧಿಸುವ ಎಲ್ಲಾ ಸಂಘಟನೆಗಳ ಉಪಸ್ಥಿತಿಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ.
Nirnayagalu.karyagatavagali.sir.danyavadagalu.
ReplyDelete