ದಿನಾಂಕ: 25-02-2022 ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ
ದಿನಾಂಕ: 25-02-2022 ರಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ನಡೆದ ಆಯವ್ಯಯ ಪೂರ್ವಭಾವಿ ಸಭೆ.
2022-23 ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿವರು ಹಾಗೂ ಪದಾಧಿಕಾರಿಗಳ ನಿಯೋಗವು ಭಾಗವಹಿಸಿ ಕೇಂದ್ರ ಮಾದರಿಯ ವೇತನ ಜಾರಿ ಹಾಗೂ ಎನ್.ಪಿ.ಎಸ್. ರದ್ದುಗೊಳಿಸುವ ಸಂಬಂಧ ಅಂಕಿ-ಅಂಶಗಳೊಂದಿಗೆ ಪ್ರಸ್ತಾವನೆಯನ್ನು ಮಂಡಿಸಿದರು.
ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಪರಿಷ್ಕರಣೆಗಾಗಿ “ಅಧಿಕಾರಿಗಳ ವೇತನ ಸಮಿತಿ” ರಚಿಸಲು ತಾತ್ವಿಕ ಒಪ್ಪಿಗೆ ಸೂಚಿಸಿ, ಆಯವ್ಯಯದಲ್ಲಿ ಪ್ರಸ್ತಾಪಿಸುವ ಭರವಸೆಯನ್ನು ನೀಡಿದರು.
• ಇತ್ತೀಚಿಗೆ ರಾಜಸ್ಥಾನ ಸರ್ಕಾರವು ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಘೋಷಿಸಿದ್ದು, ಅದರಂತೆ ಅಧ್ಯಯನ ನಡೆಸಿ ಒ.ಪಿ.ಎಸ್. ಜಾರಿಗೆ ತರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.
• ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ/ನೌಕರರ ಮೇಲಿನ ಹಲ್ಲೆಗಳನ್ನು ನಿಯಂತ್ರಿಸಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ತಂದು ಜಾಮೀನುರಹಿತ ಬಂಧನದಂತಹ ಕಠಿಣ ಕಾನೂನನ್ನು ಜಾರಿಗೆ ತರುವ ಭರವಸೆ ನೀಡಿದರು.
• ನೌಕರರುಗಳ ತರಬೇತಿಗಾಗಿ 6 ಜಿಲ್ಲಾ ತರಬೇತಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅನುಭವಿ ವಿಷಯ ತಜ್ಞರನ್ನು ನೇಮಿಸುವ ಮೂಲಕ ಪುನಶ್ಚೇತನಗೊಳಿಸುವ ಭರವಸೆ ನೀಡಿದರು
ಈ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಶ್ರೀ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು ಶ್ರೀ ಮಂಜುನಾಥ್ ಪ್ರಸಾದ್, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಪಿ.ಸಿ. ಜಾಫರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯವರಾದ ಶ್ರೀಮತಿ ಪಿ. ಹೇಮಲತರವರು ಉಪಸ್ಥಿತರಿದ್ದರು.
Comments
Post a Comment