Skip to main content

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

7 ನೇ ವೇತನ ಆಯೋಗ ಶೀಘ್ರ- ವೇತನ ಪರಿಷ್ಕರಣೆ ಸಂಬಂಧ ಶೇ .90 ಕಾರ್ಯ ಮುಕ್ತಾಯವಾಗಿದೆ . ಉಳಿದ ಕೆಲಸ ಮುಗಿಸಲು ಅಧಿಕಾರಿಗಳ ಸಮಿತಿಯಾದರೆ ಸಾಕು , ಬಜೆಟ್‌ಗೆ ಮುನ್ನ ಸಿಎಂ ಕರೆದಾಗ ಮನವಿ ನೀಡುತ್ತೇವೆ ಖಾಲಿ ಹುದ್ದೆ ಇರುವುದರಿಂದ ಒತ್ತಡದಲ್ಲಿ ನೌಕರರು ಕೆಲಸ ಮಾಡುತ್ತ ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಮಾಡಿದ್ದೇವೆ .- ಸಿ.ಎಸ್ . ಷಡಾಕ್ಷರಿ, ಅಧ್ಯಕ್ಷರು ಸರ್ಕಾರಿ ನೌಕರರ ಸಂಘ.

7 ನೇ ವೇತನ ಆಯೋಗ ಶೀಘ್ರ
ಸಿದ್ಧತೆ ಆರಂಭಿಸಿದ ಸರ್ಕಾರ , ಬಜೆಟ್‌ನಲ್ಲಿ ಹೊರಬೀಳಲಿದೆ ಘೋಷಣೆ.
ವೇತನ ಪರಿಷ್ಕರಣೆ ಸಂಬಂಧ ಶೇ .90 ಕಾರ್ಯ ಮುಕ್ತಾಯವಾಗಿದೆ . ಉಳಿದ ಕೆಲಸ ಮುಗಿಸಲು ಅಧಿಕಾರಿಗಳ ಸಮಿತಿಯಾದರೆ ಸಾಕು , ಬಜೆಟ್‌ಗೆ ಮುನ್ನ ಸಿಎಂ ಕರೆದಾಗ ಮನವಿ ನೀಡುತ್ತೇವೆ ಖಾಲಿ ಹುದ್ದೆ ಇರುವುದರಿಂದ ಒತ್ತಡದಲ್ಲಿ ನೌಕರರು ಕೆಲಸ ಮಾಡುತ್ತ ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಮಾಡಿದ್ದೇವೆ .- ಸಿ.ಎಸ್ . ಷಡಾಕ್ಷರಿ, ಅಧ್ಯಕ್ಷರು ಸರ್ಕಾರಿ ನೌಕರರ ಸಂಘ.


ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7 ನೇ ವೇತನ ಆಯೋಗ ರಚನೆಯನ್ನು ಬಜೆಟ್‌ನಲ್ಲಿ ಘೋಷಿಸಲು ಸರ್ಕಾರ ಸಿದ್ಧತೆ ನಡೆಸಿರುವಂತೆಯೇ , ನೌಕರರು ಕೇಂದ್ರ ಮಾದರಿ ವೇತನ ಸಿಗುವುದೇ ? ಇಲ್ಲವೇ ಎಂಬ ಆತಂಕದಲ್ಲಿದ್ದಾರೆ . ರಾಜ್ಯದಲ್ಲಿ 7 ನೇ ವೇತನ ಆಯೋಗ 2022 ರ ಜುಲೈನಿಂದ ಜಾರಿಗೆ ಬರಬೇಕಾಗಿದೆ . ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ಬೇಡಿಕೆಯಾದ ಕೇಂದ್ರದ ಮಾದರಿ ವೇತನಕ್ಕಾಗಿ ನೌಕರರು ಒತ್ತಡ ತರುತ್ತಿದ್ದಾರೆ . ಆದರೆ ಆ ವೇತನ ಸಿಕ್ಕುವುದೇ ಅಥವಾ ಸರ್ಕಾರ ಆಯೋಗದ ಮೂಲಕ ಮೂಗಿಗೆ ತುಪ್ಪ ಸವರುವುದೇ ಎಂಬುದು ನೌಕರರ ಪ್ರಶ್ನೆ ಯಾವ ಸಮಿತಿ ?: ನೌಕರರ ವೇತನ ಪರಿಷ್ಕರಣೆಗೆ ಹೆಚ್ಚಿನ ಸಮಸ್ಯೆ ಇಲ್ಲ ಆದ್ದರಿಂದ ಅಧಿಕಾರಿಗಳ ಸಮಿತಿ ರಚನೆಯಾಗಲಿ ಎಂಬುದು ರಾಜ್ಯ ಸರ್ಕಾರಿ ನೌಕರರ ಸಂಘದ ಒತ್ತಡವಾಗಿದೆ ಆದರೆ ಸಚಿವಾಲಯ ನೌಕರರು ಹಾಗೂ ಇತರ ನೌಕರರ ಸಂಘಟನೆಗಳು ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯೇ ಆಗಬೇಕು , ಇಲ್ಲದಿದ್ದರೆ ತಿಪ್ಪೆ ಸಾರಿಸುವ ಕೆಲಸವಾಗುತ್ತದೆಯೇ ಹೊರತು ನ್ಯಾಯ ಸಿಗುವುದಿಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿವೆ . ಆಯೋಗ ರಚನೆಯಾಗಿಲ್ಲ : ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 1966 ರಿಂದ 2017 ರ ಅವಧಿ ಯಲ್ಲಿ 11 ವೇತನ ಆಯೋಗ ರಚನೆಯಾಗಬೇಕಾಗಿತ್ತು . ಆದರೆ ರಚನೆಯಾಗಿರುವುದು 6 ಮಾತ್ರ , 3 ಅಧಿಕಾರಿ ಸಮಿತಿ ಹಾಗೂ ಒಂದು ಸಂಪುಟ ಉಪ ಸಮಿತಿ ರಚನೆಯಾಗಿದೆ , ಇದರಿಂದಾಗಿಯೇ ಅನ್ಯಾಯವಾಗಿದೆ . ವೇತನ ಪರಿಷ್ಕರಣೆ ವೈಜ್ಞಾನಿಕವಾಗಿ ಆಗದೆ ಅವೈಜ್ಞಾನಿಕವಾಗಿದೆ ಎಂದು ನೌಕರರು ಹೇಳುತ್ತಾರೆ . ಗ್ರೇಡ್ ಪೇ ಸಮಸ್ಯೆ : ಕೇಂದ್ರ ಸರ್ಕಾರ ತನ್ನ ನೌಕರರಿಗೆ ನೀಡುವ ಗ್ರೇಡ್ ಪೇಯನ್ನು ರಾಜ್ಯದಲ್ಲಿಯೂ ನೀಡಿದರಷ್ಟೇ ವ್ಯತ್ಯಾಸ ಇರುವುದಿಲ್ಲ . 


Comments

Popular posts from this blog

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಬ್ಬನ್ ಉದ್ಯಾನವನ , ಬೆಂಗಳೂರು- 01 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ SSLC & PUC ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ-2025   ಆತ್ಮೀಯ ನೌಕರ ಬಾಂಧವರೇ...... 2025 ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗಿನ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-06 -2025. Online ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ಮಾಹಿತಿಗಾಗಿ KSGEA NEWS YOUTUBE                                         ಚಾನಲ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು     ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.  ನಿಗಮ , ಮಂಡಳಿ , ಪ್ರಾಧಿಕಾರ , ವಿಶ್ವವಿದ್ಯಾಲಯ , ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮ...

2024-25ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು 2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರು Online ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ.      2024-25 ನೇ ಸಾಲಿನಲ್ಲಿ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರಿತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ/ದ್ವಿತೀಯ/ತೃತೀಯ ಸ್ಥಾನದಲ್ಲಿ ವಿಜೇತರಾದ ರಾಜ್ಯ ಸರ್ಕಾರಿ ಅಧಿಕಾರಿ ನೌಕರರಿಗೆ ದಿನಾಂಕ: 18-05-2025 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ “ಅಭಿನಂದನೆ” ಸಲ್ಲಿಸಲು ಉದ್ದೇಶಿಸಲಾಗಿದೆ.     ರಾ ಷ್ಟ್ರ ಮಟ್ಟದ ಅಖಿಲ ಭಾರತ ಸಿವಿಲ್ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ   ಪ್ರಥಮ/ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ವಿಜೇತರಾದ ಕ್ರೀಡಾಪಟುಗಳು ಮಾತ್ರ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಕಂಡ ಲಿಂಕ್ ಮುಖಾಂತರ Online ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.       -: ಅರ್ಜಿ ಸಲ್ಲಿಸಲು ನಿಬಂಧನೆಗಳು :- 1.    2024-25 ನೇ ಸಾಲಿನಲ್ಲಿ ವಿಜೇತರಾದ ಕ್ರೀಡಾಪಟುಗಳು ಮಾತ್ರ ಸಂಘವು ಬಿಡುಗಡೆಗೊಳಿಸಿರುವ ನಮೂನೆಯನ್ನು ಭರ್...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ.

 ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿ. ಆತ್ಮೀಯ ನೌಕರ ಬಾಂಧವರೇ...... 2023ನೇ ಸಾಲಿನ SSLC & PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ-2023ಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾವಾರು ಹಮ್ಮಿಗೊಳ್ಳಲಾಗುತ್ತಿದ್ದು, ಸ್ಥಳ ಹಾಗೂ ಸಮಯವನ್ನು ಮುಂದೆ ತಿಳಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಕಂಡ ಲಿಂಕ್ ಬಳಸಿ.  https://drive.google.com/drive/folders/1DvfkOB5L_JW2j8bGNL8iU9i2wNLDhv49?usp=sharing

Followers